Friday, September 11, 2026
Friday, September 11, 2026

ಸಾಲದ ಉರುಳಿಗೆ ಜೀವ ತೆತ್ತ ಆಟೋ ಚಾಲಕ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Date:

ಶಿವಮೊಗ್ಗದಲ್ಲಿ ಸಾಲದ ಬಾಧೆ ಮತ್ತೊಂದು ಜೀವ ಬಲಿ ಪಡೆದಿದೆ. ಆಟೋ ಸಾಲ ಮರುಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆಟೋ ವಶಪಡಿಸಿಕೊಂಡಿದ್ದಾರೆ ಎನ್ನಲಾದ ಘಟನೆ ಬಳಿಕ ಮನನೊಂದ ಆಟೋ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಮೃತರನ್ನು 35 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಮಂಜುನಾಥ್, ತಮ್ಮ ಪ್ಯಾಸೆಂಜರ್ ಆಟೋ ಖರೀದಿಗಾಗಿ ಸುಮಾರು 30 ಸಾವಿರ ರೂಪಾಯಿ ಸಾಲ ಪಡೆದಿದ್ದರು. ಸಾಲದ ಹಣವನ್ನು ಮರುಪಾವತಿಸಲು ಸಾಧ್ಯವಾಗದ ಹಿನ್ನೆಲೆ, ಅವರ ಆಟೋವನ್ನು ಬಲವಂತವಾಗಿ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ತಮ್ಮ ಜೀವನೋಪಾಯದ ಪ್ರಮುಖ ಆಧಾರವಾಗಿದ್ದ ಆಟೋ ಕೈತಪ್ಪಿದ್ದರಿಂದ ಮಂಜುನಾಥ್ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ನೋವಿನಿಂದ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಇಬ್ಬರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡಪೇಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Search on web

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...