Friday, September 11, 2026
Friday, September 11, 2026

ರೈತರ ಜಮೀನು ಬಲವಂತ ವಶಪಡಿಸುವುದಿಲ್ಲ.ಆದರೆ ಬಿಡದಿ ಟೌನ್ ಶಿಪ್ ಯೋಜನೆ ನಿಲ್ಲಲ್ಲ: ಡಿ.ಕೆ.ಶಿವಕುಮಾರ್

Date:

ಪ್ರಸ್ತಾವಿತ ಬಿಡದಿ ಟೌನ್‍ಶಿಪ್ ಯೋಜನೆಗಾಗಿ ಯಾವುದೇ ಒಬ್ಬ ರೈತನ ಜಮೀನನ್ನೂ ಸಹ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ. ಜಮೀನು ನೀಡಲು ಇಷ್ಟವಿಲ್ಲದ ರೈತರು ಮುಕ್ತವಾಗಿ ಕೃಷಿ ಚಟುವಟಿಕೆಗಳನ್ನು ಮುಂದುವರಿಸಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆಯ ಇತಿಹಾಸದ ಅಧಿಕೃತ ದಾಖಲೆಗಳನ್ನು ಪ್ರಸ್ತುತಪಡಿಸಿದರು. ಸರ್ಕಾರ ಯಾರೊಬ್ಬರನ್ನೂ ಭೂಮಿ ನೀಡುವಂತೆ ಒತ್ತಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

“ಯಾರಿಗೆ ಭೂಮಿ ನೀಡಲು ಇಷ್ಟವಿಲ್ಲವೋ ಅವರು ಕೃಷಿ ಮಾಡಿಕೊಂಡಿರಬಹುದು. ಯಾರು ಸ್ವಇಚ್ಛೆಯಿಂದ ಭೂಮಿ ನೀಡಲು ಸಿದ್ಧರಿದ್ದಾರೋ, ಅವರು ಸರ್ಕಾರಕ್ಕೆ ಒಪ್ಪಿಸಿ ಪರಿಹಾರ ಪಡೆದುಕೊಳ್ಳಬಹುದು. ಆದರೆ ಒಂದು ಗುಂಟೆ ಜಮೀನನ್ನೂ ಬಲವಂತವಾಗಿ ಕಿತ್ತುಕೊಳ್ಳುವುದಿಲ್ಲ,” ಎಂದು ಹೇಳಿದರು.

ಸಾಧಕ-ಬಾಧಕಗಳ ಪರಿಶೀಲನೆಗೆ ಸಮಿತಿ ರಚನೆ :

ಯೋಜನೆಯ ಅನುಷ್ಠಾನದ ಕುರಿತು ಪರಿಶೀಲಿಸಲು ಮತ್ತು ರೈತರ ಅಭಿಪ್ರಾಯ ಹಾಗೂ ಆತಂಕಗಳನ್ನು ಆಲಿಸಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ತಿಳಿಸಿದ ಅವರು, ಭೂಮಿ ನೀಡದ ರೈತರ ಜಮೀನಿನ ಸದ್ಯದ ಸ್ಥಿತಿಗತಿಯನ್ನು (Land Status) ಬದಲಾಯಿಸುವುದಿಲ್ಲ ಎಂದು ಆಶ್ವಾಸನೆ ನೀಡಿದರು. ಸಮಿತಿಯ ವರದಿ ಬಂದ ನಂತರ ಮುಂದಿನ ನಿರ್ಧಾರವನ್ನು ಸಂಪುಟ ಸಭೆಯ ಮುಂದೆ ಮಂಡಿಸಲಾಗುವುದು ಎಂದರು.

ಬಿಡದಿಯಲ್ಲಿ ಜಮೀನು ಸರ್ವೆ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಅವರು, ರಾಜಕೀಯ ಪ್ರೇರಣೆಯಿಂದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ಕೆಲವು ವ್ಯಕ್ತಿಗಳು ರೈತರನ್ನು ಹಾದಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದರು.

ಇದು ನನ್ನ ಕನಸಿನ ಯೋಜನೆಯಲ್ಲ!
ಬಿಡದಿ ಟೌನ್‍ಶಿಪ್ ಯೋಜನೆ ನನ್ನ ಕನಸಿನ ಯೋಜನೆಯಲ್ಲ. ನಾನು ಎಂದಿಗೂ ಇದರ ಮಾಲೀಕತ್ವ ಅಥವಾ ಶ್ರೇಯಸ್ಸನ್ನು ಪಡೆದಿಲ್ಲ, ಕನಿಷ್ಠ ಇದಕ್ಕೆ ಶಂಕುಸ್ಥಾಪನೆಯನ್ನೂ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನಾನು ಕೇವಲ ಹಿಂದಿನ ಸರ್ಕಾರಗಳು ಆರಂಭಿಸಿದ್ದ ಯೋಜನೆಯನ್ನು ಮುಂದುವರಿಸುತ್ತಿದ್ದೇನೆ ಅμÉ್ಟ. ನಾನು ಕೂಡ ಒಬ್ಬ ರೈತನ ಮಗ, ರೈತರ ಕಷ್ಟ ನನಗೆ ಗೊತ್ತು. ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ಕೆಲಸವನ್ನು ನಾನು ಮಾಡುವುದಿಲ್ಲ,” ಎಂದು ಭಾವುಕರಾಗಿ ನುಡಿದರು.

ಈ ಯೋಜನಾ ಪ್ರದೇಶವನ್ನು ‘ರೆಡ್ ಝೋನ್’ ಎಂದು ಘೋಷಿಸಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿತ್ತು. ಬಿಡಿಎ ಅನುಮೋದನೆ ಇಲ್ಲದೆ ಯಾವುದೇ ಅಭಿವೃದ್ಧಿ ಕಾರ್ಯ ಮಾಡುವಂತಿರಲಿಲ್ಲ. 2007ರಲ್ಲಿ ಮಾರಂಡಹಳ್ಳಿ, ಒಡೆಯರಹಳ್ಳಿ ಸೇರಿದಂತೆ ಮತ್ತಷ್ಟು ಗ್ರಾಮಗಳನ್ನು ಇದಕ್ಕೆ ಸೇರಿಸಲಾಗಿತ್ತು.

DLF ಕಂಪನಿಗೆ ಅನುಮತಿ: ಹಿಂದಿನ ಸರ್ಕಾರವೇ ಗ್ರಾಮಠಾಣಾ ಸೇರಿದಂತೆ ಆಸ್ತಿಗಳ ಪರಿಹಾರ ಗುರುತಿಸಿ, ಖಾಸಗಿ ಡೆವಲಪರ್ ಡಿಎಲ್‍ಎಫ್ ಕಂಪನಿಯಿಂದ 400 ಕೋಟಿ ರೂ. ಭದ್ರತಾ ಠೇವಣಿ ಪಡೆದು ಯೋಜನೆಗೆ ಪಾಲ್ಗೊಳ್ಳಲು ಅನುಮತಿ ನೀಡಿತ್ತು ಎಂದು ಹೇಳಿದರು.

ಮುಂದುವರಿದು, 2010 ರಲ್ಲಿದ್ದ ಸರ್ಕಾರವೂ ಇದೇ ಯೋಜನೆಯನ್ನು ಮುಂದುವರಿಸಿ ಪಿಪಿಪಿ ಮಾದರಿಯಲ್ಲಿ ಜಾಗತಿಕ ಟೆಂಡರ್ ಆಹ್ವಾನಿಸಿತ್ತು ಎಂದು ನೆನಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಶಾಸಕ ಬಾಲಕೃಷ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜಿ.ಸಿ. ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...