Thursday, September 10, 2026
Thursday, September 10, 2026

ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಜೀವಂತವಾಗಿರುವ “ವಾಮಾಚಾರ” ಸ್ಥಳೀಯರಿಂದ ದೂರು

Date:

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಗ್ರಾಮದ ವಾಟೆಕೂಡ್ಲು ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ವಾಮಾಚಾರ ನಡೆಸಿರುವ ಆರೋಪ ಕೇಳಿಬಂದಿದೆ.

ಈ ಘಟನೆ ಬೆಳಕಿಗೆ ಬಂದ ಬಳಿಕ ಗ್ರಾಮಸ್ಥರಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ಜುಲೈ 15ರಂದು ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರು ರಸ್ತೆ ಬದಿಯಲ್ಲಿದ್ದ ಈ ದೃಶ್ಯವನ್ನು ನೋಡಿ ಭಯಗೊಂಡು ಅಸ್ವಸ್ಥರಾಗಿದ್ದಾರೆ ಎಂದು ಗ್ರಾಮಸ್ಥರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಶೇಖರಪ್ಪ ಬಿನ್ ಶಂಕ್ರಪ್ಪ ಹಾಗೂ ಶೇಖರ ಶೆಟ್ಟಿ ಬಿನ್ ಗಣಪಯ್ಯ ಶೆಟ್ಟಿ ಅವರ ಮನೆಗಳಿಗೆ ತೆರಳುವ ರಸ್ತೆಯ ಪಕ್ಕದಲ್ಲಿ ಗುರುತಿಸಲಾಗದ ವ್ಯಕ್ತಿಗಳು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಗ್ರಾಮಸ್ಥರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ವಾಮಾಚಾರ ನಡೆಸಿದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಗ್ರಾಮಸ್ಥರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...