Saturday, July 18, 2026
Saturday, July 18, 2026

ರೇಷ್ಮೆ ಇಲಾಖೆಯ ವಿವಿಧ ಯೋಜನೆ : ಸಹಾಯಧನ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನ

Date:

ರೇಷ್ಮೆ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಡಿ ರೇಷ್ಮೆ ಬೆಳೆಗಾರರಿಗೆ ಹಾಗೂ ರೇಷ್ಮೆ ಕೃಷಿಯಲ್ಲಿ ಆಸಕ್ತಿಯುಳ್ಳ ರೈತರಿಗೆ
ವಿವಿಧ ಸಹಾಯಧನ ಪಡೆಯಲು ಅರ್ಹ ರೈತರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಹೊಸದಾಗಿ ಹಿಪ್ಪುನೇರಳೆ ನಾಟಿ ಮಾಡಲು ಬಯಸುವ ರೈತರಿಗೆ ಆರ್ಥಿಕ ನೆರವು ಮತ್ತು ಸ್ವಂತ ನರ್ಸರಿ ಸ್ಥಾಪಿಸಲು ಇಚ್ಛಿಸುವ ಆಸಕ್ತರಿಗೆ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು
ಅರ್ಜಿ ಸಲ್ಲಿಸಲು ಆಗಸ್ಟ್ 14‌
ಕೊನೆಯ ದಿನವಾಗಿದ್ದು ಆಸಕ್ತ ರೈತರು ನಿಗದಿತ ಕೊನೆಯ ದಿನಾಂಕದೊಳಗಾಗಿ ಅಧಿಕೃತ ವೆಬ್‌ಸೈಟ್ www.shivamogga.nic.in
ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ.
ಯೋಜನೆಯ ನಿಯಮಗಳು, ಅರ್ಹತೆ ಹಾಗೂ ಅಗತ್ಯ ದಾಖಲಾತಿಗಳ ಕುರಿತು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ರೇಷ್ಮೆ ಉಪನಿರ್ದೇಶಕರ ಕಚೇರಿ, 100 ಅಡಿರಸ್ತೆ, ರಾಜೇಂದ್ರ ನಗರ, ಶಿವಮೊಗ್ಗ ದೂ.ಸಂ.:08182-184637 ನ್ನು ಸಂಪರ್ಕಿಸಬಹುದೆಂದು ರೇಷ್ಮೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...

Sahyadri Narayana Multispeciality Hospital, Shimoga ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಗೋಪಾಳದಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ.

Sahyadri Narayana Multispeciality Hospital, Shimoga ನಗರದ ಗೋಪಾಳದಲ್ಲಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ...

Pragathi Composite School ಪ್ರಬಂಧ ರಚನಾ ಸ್ಪರ್ಧೆಗಳಿಂದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣದ ಜೊತೆ ಆತ್ಮವಿಶ್ವಾಸ ವೃದ್ಧಿ – ಡಾ.ಪ್ರಭಾಕರ ರಾವ್.

Pragathi Composite School ಪಠ್ಯದ ಜೊತೆಗಿನ ಪಠ್ಯೇತರ ಚಟುವಟಿಕೆಗಳು ವಿದ್ಯಾಭ್ಯಾಸದಲ್ಲಿ ಅಂಕಗಳಿಕೆ,...