Sunday, July 19, 2026
Sunday, July 19, 2026

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Date:

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ ಜಲಾಶಯಗಳ ಒಳಹರಿವು ಬಹುತೇಕ ಶೂನ್ಯಕ್ಕೆ ಇಳಿದಿರುವ ಹಿನ್ನೆಲೆಯಲ್ಲಿ, ಪ್ರಸಕ್ತ ಸಾಲಿನಲ್ಲಿ ಜಲಾಶಯಗಳನ್ನು ನಂಬಿಕೊಂಡು ಯಾವುದೇ ಮುಂಗಾರು ಹಂಗಾಮಿನ ಬೆಳೆಗಳನ್ನು ಬೆಳೆಯದಂತೆ ಕ.ನೀ. ನಿ.ನಿ ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಅವರು ರೈತರಲ್ಲಿ ಮನವಿ ಮಾಡಿದ್ದಾರೆ.
ಕಳೆದ ಜುಲೈ 2 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಬರದ ಪರಿಸ್ಥಿತಿ ಕುರಿತು ಸುಧೀರ್ಘ ಚರ್ಚೆ ನಡೆಸಲಾಗಿದ್ದು, “ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ” ಎಂದು ಸನ್ಮಾನ್ಯ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದರು.
ಮುಖ್ಯಮಂತ್ರಿಗಳ ನಿರ್ದೇಶನದಂತೆ ಪ್ರಸ್ತುತ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕಡ್ಡಾಯವಾಗಿ ಕೇವಲ ಕುಡಿಯುವ ನೀರಿಗಾಗಿ ಮಾತ್ರ ಕಾಯ್ದಿರಿಸಬೇಕಾದ ತುರ್ತು ಪರಿಸ್ಥಿತಿ ಎದುರಾಗಿದೆ. ಸರ್ಕಾರದ ಸುತ್ತೋಲೆಯ ಅನ್ವಯ, ರೈತರಿಗೆ ಈ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಡಲು ಹಾಗೂ ಆಯಾ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಲು ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ.
ಕುಡಿಯುವ ನೀರಿಗೆ ಮಾತ್ರ ಜಲ ಬಿಡುಗಡೆ
“ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆ ಹಾಗೂ ತುಂಗಾ ಅಣೆಕಟ್ಟು ಕಾಲುವೆಗಳಲ್ಲಿ ಕೇವಲ ಜನ-ಜಾನುವಾರುಗಳ ಕುಡಿಯುವ ನೀರಿನ ಉದ್ದೇಶಕ್ಕೆ ಸೀಮಿತವಾಗಿ ಮಾತ್ರ ನೀರನ್ನು ಹರಿಸಲು ಈಗಾಗಲೇ ದಿನಾಂಕ: 03.07.2026 ರಂದು ಅಧಿಕೃತ ಪ್ರಕಟಣೆ ಹೊರಡಿಸಿ ಕ್ರಮ ಕೈಗೊಳ್ಳಲಾಗಿದೆ.”
Department of Agriculture ಆದ್ದರಿಂದ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತ ಬಾಂಧವರು ಯಾವುದೇ ನೀರಾವರಿ ಬೆಳೆಗಳನ್ನು ಬೆಳೆಯಲು ಮುಂದಾಗಬಾರದೆಂದು ವಿನಂತಿಸಲಾಗಿದ್ದು ಜಲಕ್ಷಾಮದ ಈ ಸಂದರ್ಭದಲ್ಲಿ ರೈತರು ಪರಿಸ್ಥಿತಿಯನ್ನು ಅರ್ಥೈಸಿಕೊಂಡು, ಇಲಾಖೆಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕಾಗಿ ಕ ನೀ ನಿ ನಿ, ತುಂಗಾ ಮೇಲ್ದಂಡೆ ಯೋಜನೆ ವಿಭಾಗದ
ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...

Sahyadri Narayana Multispeciality Hospital, Shimoga ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಗೋಪಾಳದಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ.

Sahyadri Narayana Multispeciality Hospital, Shimoga ನಗರದ ಗೋಪಾಳದಲ್ಲಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ...