Monday, July 20, 2026
Monday, July 20, 2026

B.Y. Raghavendra ಲೇಖನಿ ಮೂಲಕ ಸಾಮಾಜಿಕ ತಪ್ಪು ತಿದ್ದುವ ಪತ್ರಕರ್ತರು ರಕ್ತದಾನಿಗಳಾಗಿ ಜೀವವುಳಿಸುವ ಕಾರ್ಯ ಮಾಡಿರುವುದು ಶ್ಲಾಘನೀಯ- ಬಿ.ವೈ.ರಾಘವೇಂದ್ರ

Date:

B.Y. Raghavendra ಇಂದು ಭದ್ರಾವತಿಯ ಲಯನ್ಸ್ ಕ್ಲಬ್ ಸಭಾಂಗಣದ ‘ಡಿ.ವಿ.ಗುಂಡಪ್ಪ ವೇದಿಕೆ’ಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕ, ಹಮ್ಮಿಕೊಳ್ಳಲಾಗಿದ್ದ “ಪತ್ರಿಕಾ ದಿನಾಚರಣೆ – 2026” ಹಾಗೂ “ಬೃಹತ್ ರಕ್ತದಾನ ಶಿಬಿರ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದರು.

ಇಂದಿನ ಮೊಬೈಲ್ ಹಾಗೂ ಡಿಜಿಟಲ್ ಯುಗದಲ್ಲಿ ಸುದ್ದಿಯ ವೇಗಕ್ಕಿಂತ ಅದರ ‘ವಿಶ್ವಾಸಾರ್ಹತೆ’ ಅತ್ಯಂತ ಮುಖ್ಯವಾಗುತ್ತದೆ. ಸತ್ಯ, ವಸ್ತುನಿಷ್ಠತೆ ಮತ್ತು ನಿಷ್ಪಕ್ಷಪಾತ ವರದಿಗಾರಿಕೆಯೇ ಪ್ರತಿಯೊಬ್ಬ ಪತ್ರಕರ್ತರ ಧೇಯವಾಗಬೇಕು ಎಂದು ಬಿ.ವೈ.ರಾಘವೇಂದ್ರ ನುಡಿದರು.

ಪತ್ರಿಕಾ ದಿನಾಚರಣೆಯ ಸವಿನೆನಪಿನಲ್ಲಿ ಸಮಾಜಮುಖಿ ಕಾರ್ಯವಾಗಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿರುವುದು ಅತ್ಯಂತ ಶ್ಲಾಘನೀಯ ಸಂಗತಿಯಾಗಿದೆ. ಲೇಖನಿಯ ಮೂಲಕ ಸಮಾಜದ ಕುಂದುಕೊರತೆಗಳಿಗೆ ಚಿಕಿತ್ಸೆ ನೀಡುವ ಪತ್ರಕರ್ತರು, ರಕ್ತದಾನದ ಮೂಲಕ ಜೀವ ಉಳಿಸುವ ಸಂಕಲ್ಪ ಮಾಡಿರುವುದು ಇತರರಿಗೆ ಮಾದರಿಯಾಗಿದೆ ಎಂದು ಸಂಸದ ರಾಘವೇಂದ್ರ ಮೆಚ್ಚುಗೆಯ ಮಾತನಾಡಿದರು.

ಇದೇ ಸಂದರ್ಭದಲ್ಲಿ ದಶಕಗಳ ಕಾಲ ಸಮಾಜದ ಕಣ್ಣಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

B.Y. Raghavendra ಉಕ್ಕಿನ ನಗರಿ ಭದ್ರಾವತಿಯ ಪ್ರಗತಿಗೆ ಹಾಗೂ ನಮ್ಮ ಭಾಗದ ಪತ್ರಕರ್ತರ ಹಿತರಕ್ಷಣೆ ಮತ್ತು ಯೋಗಕ್ಷೇಮಕ್ಕೆ ನಮ್ಮ ಸಂಪೂರ್ಣ ಬೆಂಬಲ ಸದಾ ಇರಲಿದೆ ಎಂದು ಬಿ.ವೈ.ರಾಘವೇಂದ್ರ ಕೊನೆಯಲ್ಲಿ ಆಶ್ವಾಸನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬರದ ನೆರಳಿನಲ್ಲಿ ಬದುಕು ...

Klive Special Article ಇತ್ತೀಚಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ತೀವ್ರವಾದ...

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...