Tuesday, July 21, 2026
Tuesday, July 21, 2026

ಎಸ್ ಐ ಆರ್ ಪ್ರಕ್ರಿಯೆ ವೇಳಾಪಟ್ಟಿ ಅವಧಿ ಆಗಷ್ಟ್ 8 ವರೆಗೆ ವಿಸ್ತರಣೆ

Date:

ಎಸ್ ಐ ಆರ್ ಪ್ರಕ್ರಿಯೆ ವೇಳಾಪಟ್ಟಿ ಅವಧಿಯನ್ನು ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದ್ದು, ಅರ್ಹ ನಾಗರಿಕರು ಈ ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಿ ಅವಕಾಶವನ್ನು ಬಳಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್. ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಆವರಣದಲ್ಲಿ ಭಾರತೀಯ ಚುನಾವಣಾ ಆಯೋಗ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026” ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
2002ರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಆತಂಕ ಬೇಡ:
ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಮಾಹಿತಿಗಳನ್ನು ನೀಡಿದ ಅವರು, ಮತದಾರರ ನೋಂದಣಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಜುಲೈ 29 ರಿಂದ ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ.
2002 ರ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ, ನಿಮ್ಮ ಕುಟುಂಬದ ಸದಸ್ಯರ ಹೆಸರು ಇದ್ದಲ್ಲಿ ಅವರ ಸೂಕ್ತ ದಾಖಲೆಗಳನ್ನು ನೀಡಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು.
ಒಂದು ವೇಳೆ ಕುಟುಂಬಸ್ಥರ ಹೆಸರು 2002 ರ ಪಟ್ಟಿಯಲ್ಲಿ ಇಲ್ಲದಿದ್ದರೂ ಆತಂಕಪಡುವ ಅಗತ್ಯವಿಲ್ಲ. ತಹಸೀಲ್ದಾರ್ ಅಥವಾ ಉಪವಿಭಾಗಾಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಕರೆದಾಗ ಸೂಚಿತ 11 ಅಧಿಕೃತ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಿ ನೋಂದಣಿ ಮಾಡಿಕೊಳ್ಳಬಹುದು. ಈ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಬೇಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸುವರ್ಣ ವಿ. ನಾಯಕ್, ಮುಖ್ಯ ಯೋಜನಾಧಿಕಾರಿ ಹನುಮಾ ನಾಯಕ್, ಸ್ವೀಪ್ ರಾಜ್ಯ ಮಟ್ಟದ ತರಬೇತುದಾರರಾದ ನವೀದ್ ಅಹ್ಮದ್ ಪರ್ವೇಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. G. Parameshwara ಎಸ್ ಐ ಆರ್ ಪ್ರಕ್ರಿಯೆ: ಜನರಿಗೆ ತೊಂದರೆಯಾಗದಂತೆ ಕ್ರಮ- ಡಾ.ಜಿ.ಪರಮೇಶ್ವರ

Dr. G. Parameshwara ಕೇಂದ್ರ ಸರ್ಕಾರದ ಎಸ್‌ಐಆರ್‌ ಪ್ರಕ್ರಿಯೆಗೆ ಅಗತ್ಯ...

Rotary Club of Shivamogga ಮಹಿಳಾ ಉದ್ಯಮಿಗಳೆ, ನಿಮ್ಮ ಕನಸುಗಳನ್ನ ಆತ್ಮ ವಿಶ್ವಾಸದಿಂದ ಹಂಚಿಕೊಳ್ಳಿ : ಎನ್.ಗೋಪಿನಾಥ್

Rotary Club of Shivamogga ಆತ್ಮವಿಶ್ವಾಸದಿಂದ ಕನಸುಗಳನ್ನು ಹಂಚಿಕೊಳ್ಳಿ ಎಂದು ರೋಟರಿ...