ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಂತೆ ಗೋಪಾಳ ವಲಯದ ಶ್ರೀರಾಮನಗರ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮವನ್ನು ನಡೆಸಲಾಯಿತು.
ಶ್ರೀಮತಿ ಡಾ. ಸೌಮ್ಯ. ನಿಸರ್ಗ ಆಸ್ಪತ್ರೆ, ವಿನೋಬನಗರ ಶಿವಮೊಗ್ಗ ಇವರು ದಿನನಿತ್ಯದ ಆಹಾರದಲ್ಲಿ ಪೌಷ್ಟಿಕ ಆಹಾರದ ಬಳಕೆಯ ಬಗ್ಗೆ ಜ್ಞಾನವಿಕಾಸ ಕೇಂದ್ರದ 54 ಮಹಿಳಾ ಸದಸ್ಯರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀಯುತ ರಮೇಶ್ ಸಮಾಜ ಸೇವಕರು, ಶ್ರೀಯುತ ಗಜೇಂಧ್ರಪ್ಪ ಮಾರಿಕಾಂಭಾ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರು, ಮತ್ತು ಹನುಮಂತಪ್ಪ ಗ್ರಾಮದ ಗಣ್ಯರು ಶ್ರೀಮತಿ ಚೇತನ ಜ್ಞಾನವಿಕಾಸ ಸಮನ್ವಯಾಧಿಕಾರಿ ಶಿವಮೊಗ್ಗ, ಸೇವಾಪ್ರತಿನಿಧಿ, ಪುನೀತ ಮತ್ತು ಲಕ್ಷಣ ಜ್ಞಾನವಿಕಾಸ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಜ್ಞಾನ ವಿಕಾಸ ಕಾರ್ಯಕ್ರಮದಡಿ ಆಹಾರ ಮೇಳ
Date:
