Thursday, September 10, 2026
Thursday, September 10, 2026

Rotary Club of Shivamogga ರೋಟರಿ ಸಹ್ಯಾದ್ರಿ ಮತ್ತು ಮಡಿಲು ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಮತ್ತು ತಯಾರಿ ಬಗ್ಗೆ ಮಾರ್ಗದರ್ಶನ

Date:

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಸಹ್ಯಾದ್ರಿ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಸೇವಾ ಸಂಘ (ಮಡಿಲು) ಇವರ ಸಹಯೋಗದಲ್ಲಿ ಪಿಳ್ಳಂಗೆರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಎಂಬ ವಿಷಯದ ಬಗ್ಗೆ ಹಾಗೂ ಪರೀಕ್ಷೆ ತಯಾರಿ ಬಗ್ಗೆ ಚಿಂತನ-ಮಂಥನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜೆ.ಎನ್.ಎನ್.ಸಿ.ಇ. ಎಂ.ಬಿ.ಎ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಅನುರಾಧಾ ಗಿರಿಮಾಜಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಲಿಕೆಯ ಬಗ್ಗೆ ವಿಷಯಗಳನ್ನು ಮನನ ಮಾಡಿಕೊಳ್ಳುವ ಬಗ್ಗೆ, ಪರೀಕ್ಷೆಗಳನ್ನು ತಯಾರಿ ಮಾಡಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವ ಹಾಗೆ ವಿವರವಾಗಿ ತಿಳಿಸಿಕೊಟ್ಟರು. ಈ ಬಗ್ಗೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ಕಂಡು ಬಂದಿತು.

ಪ್ರೊ. ಸಯ್ಯದ್ ಸನಾವುಲ್ಲಾ ಅವರು ಸಹ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಸಹ್ಯಾದ್ರಿಯ ಅಧ್ಯಕ್ಷರಾದ ಹುಲಿರಾಜ್ ಗುಬ್ಬಿ ಅವರು ಸಹ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ರೋಟರಿ ಬಗ್ಗೆ ಸಂಕ್ಷಿಪ್ತ ಮಾಹಿತಿ ಹಾಗೂ ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಮಾತನಾಡಿದರು.

ಈ ಮಧ್ಯೆ 6ನೇ ತರಗತಿ ಓದುತ್ತಿರುವ ಮಾಸ್ಟರ್ ಸಚಿತ್ ಗುಬ್ಬಿರವರು ಕ್ಯಾಲಿಫೋರ್ನಿಯಾದಿಂದ ಬಂದಿದ್ದು, ಭಾರತೀಯ ಶಿಕ್ಷಣ ಹಾಗೂ ಅಮೆರಿಕಾ ಶಿಕ್ಷಣದ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.

Rotary Club of Shivamogga ಈ ಸಮಾರಂಭ ವಿದ್ಯಾರ್ಥಿಗಳಿಂದ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಡಾ. ಬಿ.ಯು ಕಣ್ಣಪ್ಪನವರು ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ಶಾಲೆಯ ಸಹ ಶಿಕ್ಷಕರಾದ ಧರ್ಮಪ್ಪ ಹಾಗೂ ಉಪ ಪ್ರಾಂಶುಪಾಲರಾದ ಶ್ರೀನಿವಾಸ್‌ರವರು ಪ್ರಾಸ್ತವಿಕವಾಗಿ ಶಾಲೆಯ ಕಾರ್ಯಕ್ರಮಗಳ ಬಗ್ಗೆ ಸಭೆಗೆ ತಿಳಿಸಿಕೊಟ್ಟರು. ಸಭೆಗೆ ಆಗಮಿಸಿದ್ದ ಅತಿಥಿಗಳನ್ನು ನಿವೃತ್ತ ಡಿ.ಡಿ.ಪಿ.ಐ. ಸುಮಂಗಳಾ ಕುಚಿನಾಡ್ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜೆ.ಎನ್.ಎನ್.ಸಿ.ಇ. ಎಂ.ಬಿ.ಎ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಅನುರಾಧಾ ಗಿರಿಮಾಜಿ ಅವರ ಪರಿಚಯವನ್ನು ರಮಾ ಗುಬ್ಬಿಯವರು ಸಭೆಗೆ ಮಾಡಿಕೊಟ್ಟರು. ಕ್ಲಬ್ ನ ಕಾರ್ಯದರ್ಶಿ ಡಾ. ವೇಣುಗೋಪಾಲ್ ರೆಡ್ಡಿ ಅವರಿಂದ ವಂದನಾರ್ಪಣೆಯೊಂದಿಗೆ ಸಮಾರಂಭ ಮುಕ್ತಾಯವಾಯಿತು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಪೆನ್ನು ಮತ್ತು ಸಿಹಿಯನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...