Thursday, September 10, 2026
Thursday, September 10, 2026

ಭದ್ರಾವತಿಯಲ್ಲಿ ಎಸ್ಐಆರ್ ಕರ್ತವ್ಯನಿರತ ಅಧಿಕಾರಿ ಮೇಲೆ ಬೀದಿ ನಾಯಿ ದಾಳಿ

Date:

ಭದ್ರಾವತಿ ಹಳೇನಗರದ ಕೋಟೆ ಏರಿಯಾದಲ್ಲಿ ಮನೆ-ಮನೆಗೆ ತೆರಳಿ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಫಾರ್ಮ್‌ಗಳನ್ನು ಸಂಗ್ರಹಿಸುತ್ತಿದ್ದ ವೇಳೆ ಕರ್ತವ್ಯನಿರತ ಬಿಎಲ್‌ಒ ರಹಮತುಲ್ಲಾ (50) ಅವರ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. ದಾಳಿಯಲ್ಲಿ ಅವರ ಕಾಲಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಗಾಯಾಳು ರಹಮತುಲ್ಲಾ ಅವರನ್ನು ಉಪ ತಹಶೀಲ್ದಾರ್ ಮಂಜನಾಯ್ಕ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಘಟನೆಯ ಕುರಿತು ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಜಿಲ್ಲೆಯಲ್ಲಿ ಎಸ್‌ಐಆರ್ ಕರ್ತವ್ಯದ ವೇಳೆ ಬಿಎಲ್‌ಒ ಮೇಲೆ ನಾಯಿ ದಾಳಿ ನಡೆದಿರುವುದು ಇದು ಎರಡನೇ ಘಟನೆ. ಎರಡು ವಾರಗಳ ಹಿಂದೆ ಸಾಗರದಲ್ಲಿಯೂ ಬಿಎಲ್‌ಒ ಲಕ್ಷ್ಮೀ ಸಿಂಗ್ ಅವರ ಮೇಲೆ ಇದೇ ರೀತಿಯ ನಾಯಿ ದಾಳಿ ನಡೆದಿತ್ತು.

ಪದೇಪದೇ ಇಂತಹ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿ ತಮ್ಮ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಮನೆ-ಮನೆಗೆ ತೆರಳುವ ಸಿಬ್ಬಂದಿಗೆ ಅಗತ್ಯ ಭದ್ರತಾ ಕ್ರಮಗಳನ್ನು ಒದಗಿಸುವಂತೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...