Thursday, July 23, 2026
Thursday, July 23, 2026

ಕ್ರೀಡಾ ಇಲಾಖೆಯ ವಿವಿಧ ಯೋಜನೆಗಳಡಿ ಪ್ರಶಸ್ತಿ ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಜಿ‌ ಆಹ್ವಾನ

Date:

ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2025 ನೇ ಸಾಲಿಗೆ ರಾಜ್ಯದಲ್ಲಿ ಕ್ರೀಡೆಯ ಅಭಿವೃದ್ಧಿಗಾಗಿ ಹಾಗು ಆಯಾ ಗುಂಪು ಕ್ರೀಡೆಗಳಲ್ಲಿ ಸಾಧಿಸಿದ ಅತ್ಯುನ್ನತ ಸಾಧನೆಗಳಿಗಾಗಿ ಏಕಲವ್ಯ ಪ್ರಶಸ್ತಿ, ಕ್ರೀಡಾಕ್ಷೇತ್ರದಲ್ಲಿ ರಾಷ್ಟ್ರೀಯ/ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ರಾಜ್ಯ/ರಾಷ್ಟ್ರಕ್ಕೆ ಕೀರ್ತಿ ತಂದ ಕ್ರೀಡಾಪಟುಗಳನ್ನು ರೂಪಿಸಿದ ಹಾಗು ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ತರಬೇತುದಾರರನ್ನು ಗೌರವಿಸುವ ಜೀವಮಾನ ಸಾಧನೆ ಪ್ರಶಸ್ತಿ, ರಾಜ್ಯದಲ್ಲಿ ಗ್ರಾಮೀಣ ಕ್ರೀಡೆಯ ಅಭಿವೃದ್ಧಿಗಾಗಿ ಸ್ಥಳೀಯ ಮತ್ತು ಪಾರಂಪರಿಕ ಕ್ರೀಡೆಗಳಲ್ಲಿ ಸಾಧಿಸಿದ ಅತ್ಯುತ್ತಮ ಸಾಧನೆಗಳಿಗಾಗಿ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ರಾಜ್ಯದಲ್ಲಿ ಕ್ರೀಡಾಪಟುಗಳು ಕ್ರೀಡಾಕ್ಷೇತ್ರದಲ್ಲಿ ಸಾಧಿಸಿದ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಕ್ರೀಡಾ ಪೋಷಕರಿಗೆ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, ಭಾರತ ಸರ್ಕಾರದಿಂದ ಅಂಗೀಕೃತವಾಗಿರುವ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ/ಪದಕ ವಿಜೇತರಾಗಿದ್ದಲ್ಲಿ ನಗದು ಪುರಸ್ಕಾರ ಪ್ರಶಸ್ತಿ, ಕ್ರೀಡಾಪಟುಗಳು ಮಾಧ್ಯಮಿಕ/ಫ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ರಾಜ್ಯ ಮಟ್ಟದ ಸ್ಫರ್ದೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಹಾಗೂ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು.

ಅಂದರೆ ಅರ್ಜಿ ಆಹ್ವಾನಿಸುವ ಹಿಂದಿನ ವರ್ಷದ ಶೈಕ್ಷಣಿಕ ವರ್ಷ ಅಂದರೆ ಏಪ್ರಿಲ್ 01 ರಿಂದ ಮಾರ್ಚ್ 31ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿ ಸಾಧನೆಯನ್ನು ಮಾಡಿದವರಿಗೆ ಕ್ರೀಡಾ ವಿದ್ಯಾರ್ಥಿ ವೇತನ
ಹಾಗೂ
2026-27ನೇ ಸಾಲಿಗೆ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಸವತಿ ಮಾಡುವ ಮೂಲಕ ಪ್ರೋತ್ಸಾಹಧನ ನೀಡುವ ಶೈಕ್ಷಣಿಕ ಮರುಪಾವತಿ ಪ್ರೋತ್ಸಾಹಧನ, ಮಾನ್ಯತೆ ಪಡೆದ ಕ್ರೀಡಾಸಂಸ್ಥೆಗಳ ಲಿಖಿತ ಶಿಫಾರಸುಗಳ ಮೂಲಕ ಪ್ರತಿಭಾವಂತ ಹಾಗೂ 2028ರ ಬೇಸಿಗೆ ಒಲಂಪಿಕ್ಸ್/ ಪ್ಯಾರಲಿಂಪಿಕ್ಸ್ನಲ್ಲಿ ಭಾಗವಹಿಸಲು ಅರ್ಹತೆ ಪಡೆದು, ಪದಕ ಗೆಲ್ಲುವ ಸಂಭಾವ್ಯ ಕ್ರೀಡಾಪಟುಗಳನ್ನು ಗುರುತಿಸಿ, ಅವರಲ್ಲಿ 60 ಅತ್ಯಂತ ಅರ್ಹ ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹಧನ ನೀಡುವ ಮೂಲಕ ಒಲಂಪಿಕ್ಸ್ ನಲ್ಲಿ ಸಾಧನೆ ಮಾಡಲು ಗುರಿ ಒಲಂಪಿಕ್ ಪದಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕ್ರೀಡಾಪಟುಗಳು https://sevasindhu.karnataka.gov.in ಮೂಲಕ ಜು. 31 ರೊಳಗಾಗಿ ಅರ್ಜಿ ಸಲ್ಲಿಸಬೇಕಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...