ಶ್ರೀ ಅನ್ನಪೂರ್ಣೇಶ್ವರಿ ಮುಷ್ಟಿ ಅಕ್ಕಿ ಯೋಜನೆ ಶಿವಮೊಗ್ಗ ಹಾಗೂ ವನವಾಸಿ ಕಲ್ಯಾಣ ಕರ್ನಾಟಕ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ‘ಸ್ನೇಹ ಮಿಲನ – ೧೭ನೇ ವಾರ್ಷಿಕೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ವಿಶೇಷ ಕಾರ್ಯಕ್ರಮವು ಇದೇ ಜುಲೈ ೨೬, ೨೦೨೬ರ ಭಾನುವಾರದಂದು ಬೆಳಿಗ್ಗೆ ೧೦:೩೦ಕ್ಕೆ ನಗರದ ರವೀಂದ್ರನಗರದಲ್ಲಿರುವ ಶ್ರೀ ಗಣಪತಿ ದೇವಸ್ಥಾನದ ಅವರಣದಲ್ಲಿ ನೆರವೇರಲಿದೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಅನ್ನಪೂರ್ಣೇಶ್ವರಿ ಮುಷ್ಟಿ ಅಕ್ಕಿ ಯೋಜನೆಯ ಅಧ್ಯಕ್ಷರಾದ ಶ್ರೀಮತಿ ಸುಮಾ ಮೂರ್ತಿ ಅವರು ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಶ್ರೀ ಶಾಂತಾರಾA ಸಿದ್ಧಿ, ವನವಾಸಿ ಕಲ್ಯಾಣದ ಕ್ಷೇತ್ರೀಯ ನಗರೀಯ ಕಾರ್ಯ ಪ್ರಮುಖರಾದ ಶ್ರೀ ಗೋಪಾಲ್ ಕೇಸರಿ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಭಾಗವಹಿಸಲಿದ್ದಾರೆ.
ಅಲ್ಲದೆ, ರಾಜ್ಯ ನಗರೀಯ ಕಾರ್ಯ ಪ್ರಮುಖರಾದ ಭಗಿನಿ ವೇದಾವತಿ ಅವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿರಲಿದ್ದಾರೆ.
ಸಭಾ ಕಾರ್ಯಕ್ರಮದ ನಂತರ ಆಗಮಿಸಿದ ಎಲ್ಲಾ ಬಂಧುಗಳಿಗೆ ಮತ್ತು ಸಾರ್ವಜನಿಕರಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದ್ದು, ಪ್ರತಿಯೊಬ್ಬರೂ ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಶ್ರೀ ಅನ್ನಪೂರ್ಣೇಶ್ವರಿ ಮುಷ್ಟಿ ಅಕ್ಕಿ ಯೋಜನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ವಿನಂತಿಸಿದ್ದಾರೆ.
ವಂದನೆಗಳೊAದಿಗೆ,
ಜುಲೈ 26. ಶ್ರೀಅನ್ನಪೂರ್ಣೇಶ್ವರಿ ಮುಷ್ಠಿ ಅಕ್ಕಿ ಯೋಜನೆಯ 17 ನೇ ” ಸ್ನೇಹ ಮಿಲನ
Date:
