World Environment Day ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ಸಸಿ ನೆಡಲಾಯಿತು. ವಿದ್ಯಾರ್ಥಿಗಳಿಗೆ ಅರಣ್ಯದ ಪ್ರಾಮುಖ್ಯತೆ, ಗಿಡ ನೆಡುವುದರ ಮಹತ್ವ, ಗಿಡಗಳನ್ನು ಪೋಷಿಸುವ ಕುರಿತು ಸವಿಸ್ತಾರವಾಗಿ ಮಾಹಿತಿಯನ್ನು ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ನಾಗರಾಜ ಪರಿಸರ ನೀಡಿದರು. ತಮ್ಮ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಬದಲು ಗಿಡ ನೆಡುವ ಮೂಲಕ ಆಚರಿಸಿ ಜೀವ ವೈವಿಧ್ಯ ಸಂರಕ್ಷಣೆಗೆ ಸಹಕರಿಸಿ ಎಂದು ತಿಳಿಸಿದರು. ಕಾಲೇಜಿನ ಪ್ರಾಚಾರ್ಯರಾದ ಪ್ರೊ .ಕೃಷ್ಣ ಸ್ವಾಮಿ ವಿದ್ಯಾರ್ಥಿಗಳಿಗೆ ಗಿಡಗಳ ಮಹತ್ವದ ಕುರಿತು ತಿಳಿಸಿದರು. ನಮ್ಮ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಸಾಕಷ್ಟು ಗಿಡ ಮರಗಳು ಬೆಳೆದು ಜೀವ ವೈವಿಧ್ಯತೆಯ ತಾಣವಾಗಿ ಮಾರ್ಪಟ್ಟಿರುವುದು ನಮಗೆ World Environment Day ತುಂಬಾ ಸಂತೋಷ ತಂದಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಾಣಿಶಾಸ್ತ್ರ ವಿಭಾಗದ ಪ್ರೊ.ಸೋಮಶೇಖರ್, ಪ್ರೊ .ಸಾಯಿಶ್ವರ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ವೃಂದದವರಾದ ಡಾ.ವೆಂಕಟೇಶ್, ಡಾ.ವರುಣ್ ಕುಮಾರ್, ಡಾ.ಪುರುಷೋತ್ತಮ್ ,ಶ್ರೀ ಅನಿಲ್ ಎಸ್, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
World Environment Day ಜನ್ಮದಿನಾಚರಣೆಗೆ ಕೇಕ್ ಕತ್ತರಿಸಬೇಡಿ.ಒಂದು ಗಿಡ ನೆಡಿ- ಡಾ. ನಾಗರಾಜ್. ಪರಿಸರ
Date:
