Wednesday, September 9, 2026
Wednesday, September 9, 2026

World Environment Day ಜನ್ಮದಿನಾಚರಣೆಗೆ ಕೇಕ್ ಕತ್ತರಿಸಬೇಡಿ.ಒಂದು ಗಿಡ ನೆಡಿ- ಡಾ. ನಾಗರಾಜ್. ‌ಪರಿಸರ

Date:

World Environment Day ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ಸಸಿ ನೆಡಲಾಯಿತು. ವಿದ್ಯಾರ್ಥಿಗಳಿಗೆ ಅರಣ್ಯದ ಪ್ರಾಮುಖ್ಯತೆ, ಗಿಡ ನೆಡುವುದರ ಮಹತ್ವ, ಗಿಡಗಳನ್ನು ಪೋಷಿಸುವ ಕುರಿತು ಸವಿಸ್ತಾರವಾಗಿ ಮಾಹಿತಿಯನ್ನು ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ನಾಗರಾಜ ಪರಿಸರ ನೀಡಿದರು. ತಮ್ಮ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಬದಲು ಗಿಡ ನೆಡುವ ಮೂಲಕ ಆಚರಿಸಿ ಜೀವ ವೈವಿಧ್ಯ ಸಂರಕ್ಷಣೆಗೆ ಸಹಕರಿಸಿ ಎಂದು ತಿಳಿಸಿದರು. ಕಾಲೇಜಿನ ಪ್ರಾಚಾರ್ಯರಾದ ಪ್ರೊ .ಕೃಷ್ಣ ಸ್ವಾಮಿ ವಿದ್ಯಾರ್ಥಿಗಳಿಗೆ ಗಿಡಗಳ ಮಹತ್ವದ ಕುರಿತು ತಿಳಿಸಿದರು. ನಮ್ಮ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಸಾಕಷ್ಟು ಗಿಡ ಮರಗಳು ಬೆಳೆದು ಜೀವ ವೈವಿಧ್ಯತೆಯ ತಾಣವಾಗಿ ಮಾರ್ಪಟ್ಟಿರುವುದು ನಮಗೆ World Environment Day ತುಂಬಾ ಸಂತೋಷ ತಂದಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಾಣಿಶಾಸ್ತ್ರ ವಿಭಾಗದ ಪ್ರೊ.ಸೋಮಶೇಖರ್, ಪ್ರೊ .ಸಾಯಿಶ್ವರ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ವೃಂದದವರಾದ ಡಾ.ವೆಂಕಟೇಶ್, ಡಾ.ವರುಣ್ ಕುಮಾರ್, ಡಾ.ಪುರುಷೋತ್ತಮ್ ,ಶ್ರೀ ಅನಿಲ್ ಎಸ್, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...