S.N. Channabasappa “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ನೀಟ್ ಪ್ರತಿಭಟನೆಯ ಹೆಸರಿನಲ್ಲಿ ಬಂದ ಗಲಭೆಕೋರರು ಬಹಿರಂಗವಾಗಿ ಗೃಹ ಇಲಾಖೆ ಹಾಗೂ ಪೊಲೀಸರಿಗೇ ಸವಾಲು ಹಾಕುತ್ತಿದ್ದರೂ, ಅಂತಹ ಕಾನೂನು ಭಂಜಕರನ್ನು ಬಂಧಿಸಿ ಜೈಲಿಗಟ್ಟುವ ಧೈರ್ಯವಿಲ್ಲದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಅಸಮರ್ಥತೆಯನ್ನು ಮುಚ್ಚಿಕೊಳ್ಳಲು ಬಿಜೆಪಿ ನಾಯಕರ ವಿರುದ್ಧ ದ್ವೇಷದ ರಾಜಕಾರಣಕ್ಕಿಳಿದಿದ್ದಾರೆ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯ ನಾಯಕರು, ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ.ಟಿ. ರವಿ ಅವರ ಧ್ವನಿಯನ್ನು ಅಡಗಿಸಲು ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿ ಸುಳ್ಳು ಎಫ್ಐಆರ್ (FIR) ದಾಖಲಿಸಿ, ಬಂಧಿಸಲು ಯತ್ನಿಸುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಇಂತಹ ಬೆದರಿಕೆ ಹಾಗೂ ಸೇಡಿನ ರಾಜಕಾರಣಕ್ಕೆ ಬಿಜೆಪಿ ಎಂದಿಗೂ ಬಗ್ಗುವುದಿಲ್ಲ.
“ನೈಜ ಅಪರಾಧಿಗಳು, ದೇಶದ್ರೋಹಿ ಶಕ್ತಿಗಳು ಹಾಗೂ ರಾಜಧಾನಿಯಲ್ಲಿ ಬಹಿರಂಗವಾಗಿ ಗೂಂಡಾಗಿರಿ ನಡೆಸಿದವರನ್ನು ಬಂಧಿಸಲು ಪೂರ್ಣ ವಿಫಲರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಸಚಿವರಾಗಿ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ನೈತಿಕ ಹಕ್ಕು ಉಳಿದಿಲ್ಲ.
S.N. Channabasappa ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲರಾಗಿರುವ ಮತ್ತು ವಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ಹಗೆತನ ಸಾಧಿಸುತ್ತಿರುವ ಅಸಮರ್ಥ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮುಖ್ಯಮಂತ್ರಿಗಳು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕು,” ಎಂದು ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಆಗ್ರಹಿಸಿದ್ದಾರೆ.
