Saturday, August 1, 2026
Saturday, August 1, 2026

District Consumer Disputes Redressal Commission ಕಾನೂನುಬಾಹಿರವಾಗಿ ಜೆಸಿಬಿ ಜಪ್ತಿ : ಫೈನಾನ್ಸ್ ಕಂಪನಿಗೆ ದಂಡ ವಿಧಿಸಿದ ಜಿಲ್ಲಾ ಗ್ರಾಹಕರ ಆಯೋಗ

Date:

District Consumer Disputes Redressal Commission ಯಾವುದೇ ಪೂರ್ವ ನೋಟೀಸ್ ನೀಡದೆ ಕಾನೂನುಬಾಹಿರವಾಗಿ ಜೆಸಿಬಿ ಯಂತ್ರವನ್ನು ಜಪ್ತಿ ಮಾಡಿ ಸೇವಾ ನ್ಯೂನ್ಯತೆ ಎಸಗಿದ್ದ ಎಚ್.ಡಿ.ಬಿ ಫೈನಾನ್ಸ್ ಸರ್ವೀಸಸ್ ಸಂಸ್ಥೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಸೂಕ್ತ ಆದೇಶ ಹಾಗೂ ದಂಡ ವಿಧಿಸಿದೆ.
ಸೊರಬ ತಾಲೂಕಿನ ಬೆನ್ನೂರು ಗ್ರಾಮದ ಮಂಜಪ್ಪ ಕೆ. ಎಂಬುವರು ಎಚ್.ಡಿ.ಬಿ ಫೈನಾನ್ಸ್ ಸರ್ವೀಸಸ್‌ನಿಂದ ರೂ.31,67,455/- ಸಾಲ ಪಡೆದು ಜೆಸಿಬಿ ಖರೀದಿಸಿದ್ದರು. ಪ್ರತಿ ತಿಂಗಳು ರೂ.71,500/- ಕಂತು ಪಾವತಿಸಬೇಕಿದ್ದು, ಪ್ರತಿ ತಿಂಗಳೂ ಸರಿಯಾಗಿ ಪಾವತಿಸುತ್ತಿದ್ದರು. ಆದರೆ, ಅಧಿಕ ಮಳೆ ಹಾಗೂ ಜೆಸಿಬಿ ರಿಪೇರಿ ಕಾರಣದಿಂದ 3 ತಿಂಗಳ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ.
ಯಾವುದೇ ಮುನ್ಸೂಚನೆ ಅಥವಾ ನೋಟೀಸ್ ನೀಡದೆ, 2025ರ ಆಗಸ್ಟ್ 6ರಂದು ಫೈನಾನ್ಸ್ ಸಂಸ್ಥೆಯವರು ಬಲವಂತವಾಗಿ ಜೆಸಿಬಿ ಯನ್ನು ವಶಪಡಿಸಿಕೊಂಡಿದ್ದರು. ನಂತರ ದೂರುದಾರರು ರೂ.1,00,000/- ಹಣ ಪಾವತಿಸಿ ಯಂತ್ರವನ್ನು ಹಿಂತಿರುಗಿಸುವಂತೆ ಕೋರಿದರೂ ಫೈನಾನ್ಸ್‌ನವರು ಸಂಪೂರ್ಣ ಸಾಲದ ಮೊತ್ತ ಪಾವತಿಸುವಂತೆ ಪಟ್ಟು ಹಿಡಿದಿದ್ದರು. ಇದರಿಂದ ನೊಂದ ದೂರುದಾರರು ವಕೀಲರ ಮೂಲಕ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ತೀರ್ಪು:
District Consumer Disputes Redressal Commission ದೂರುದಾರರು ಮತ್ತು ಎದುರುದಾರರ ವಾದ-ವಿವಾದಗಳನ್ನು ಆಲಿಸಿದ ಜಿಲ್ಲಾ ಗ್ರಾಹಕರ ಆಯೋಗವು, ಆರ್‌ಬಿಐ ನಿಯಮಗಳು ಹಾಗೂ ಉಚ್ಚ ನ್ಯಾಯಾಲಯ/ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಫೈನಾನ್ಸ್ ಕಂಪನಿಯು ಸೇವಾ ನ್ಯೂನ್ಯತೆ ಎಸಗಿದೆ ಎಂದು ತೀರ್ಮಾನಿಸಿದೆ.
ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಹಾಗೂ ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯರವರನ್ನೊಳಗೊಂಡ ಪೀಠವು ಈ ಆದೇಶ ನೀಡಿದ್ದು, ಆದೇಶವಾದ 45 ದಿನಗಳ ಒಳಗೆ ಫೈನಾನ್ಸ್ ಕಂಪನಿಯು ದೂರುದಾರರಿಗೆ ಜೆಸಿಬಿ ಯನ್ನು ಹಿಂತಿರುಗಿಸಬೇಕು.
45 ದಿನಗಳ ನಂತರ ಜೆಸಿಬಿ ನೀಡುವವರೆಗೆ, ವಿಳಂಬವಾಗುವ ಪ್ರತಿದಿನಕ್ಕೆ ರೂ.2,000/- ಗಳಂತೆ ದೂರುದಾರರಿಗೆ ಪಾವತಿಸಬೇಕು.
ದೂರುದಾರರಿಗೆ ಆದ ನಷ್ಟಕ್ಕೆ ಪರಿಹಾರವಾಗಿ ರೂ.10,000/- ಹಾಗೂ ದೂರಿನ ವೆಚ್ಚವನ್ನು 45 ದಿನಗಳ ಒಳಗೆ ಪಾವತಿಸಬೇಕು. ತಪ್ಪಿದ್ದಲ್ಲಿ ವಾರ್ಷಿಕ ಶೇ. 12ರ ಬಡ್ಡಿಯನ್ನು ನೀಡಬೇಕಾಗುತ್ತದೆ ಎಂದು ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...

Klive Special Article ವ್ಯಸನಮುಕ್ತ ಸಮಾಜದ ಕನಸು ಕಂಡ ಸಂತ. ಡಾ.ಮಹಾಂತ ಶಿವಯೋಗಿ.ವಿಶೇಷ ಬರಹ- ಬಿ.ವಿ.ತುಕಾರಾಂ. ಶಿವಮೊಗ್ಗ

Klive Special Article ದೇಶ ವಿದೇಶಗಳಲ್ಲಿ ಸಂಚರಿಸಿ, ಜನರಲ್ಲಿನ ದುಶ್ಚಟಗಳನ್ನೇ...

Klive Special Article ಮೋಸದ ಬಲೆಯ ಹಿಂದೆ ಸಿಲುಕಿದವರು.ವಿಶೇಷ ಲೇಖನ:ತಾಜುದ್ದೀನ್ ಖಾನ್.ಶಿವಮೊಗ್ಗ.

Klive Special Article ವಿಶ್ವ ಮಾನವ ಕಳ್ಳಸಾಗಣೆ ವಿರುದ್ಧದ ದಿನ –2026ರ...