ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿದ್ದ ಹೂವಿನ ಮಾರುಕಟ್ಟೆಯನ್ನು, ಕಳೆದ 15 ದಿನಗಳಿಂದ ವಿಶೇಷ ಕಾರ್ಯಾಚರಣೆ ನಡೆಸಿ ಸೂಕ್ತ ಸ್ಥಳಾಂತರಮಾಡಲಾಗಿದೆ.
ಹೂವಿನ ವ್ಯಾಪಾರಸ್ಥರಿಗೆ ಒಂದು ವಾರದ ಕಾಲಾವಕಾಶ ನೀಡಿದ ನಂತರ, ಶಿವಪ್ಪನಾಯಕ ಸರ್ಕಲ್ ಸಮೀಪದ ಬಹುಮಹಡಿ ಕಟ್ಟಡಕ್ಕೆ ಸಂಪೂರ್ಣವಾಗಿ ಸ್ಥಳಾಂತರಿಸಲಾಯಿತು.
ಈ ಹಿನ್ನೆಲೆಯಲ್ಲಿ, ಖಾಲಿಯಾಗಿರುವ ಸದರಿ ಸ್ಥಳದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದ್ವಿಚಕ್ರ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಈ ದಿನದಿಂದ ಕಲ್ಪಿಸಲಾಗಿದೆ.
ಸಾರ್ವಜನಿಕರು ಈ ಪಾರ್ಕಿಂಗ್ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು, ಸಂಚಾರ ವ್ಯವಸ್ಥೆ ಸುಗಮವಾಗಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾ ಪೊಲೀಸ್ ಸಾರ್ವಜನಿಕರಲ್ಲಿ ವಿನಂತಿಸಿದೆ.
