Sunday, August 2, 2026
Sunday, August 2, 2026

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

Date:

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಬಡಾವಣೆಗಳಲ್ಲೂ ನಾಗರಿಕರಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವುದು ಮತ್ತು ಸುಸಜ್ಜಿತ ನೈರ್ಮಲ್ಯ ವ್ಯವಸ್ಥೆಯನ್ನು ನಿರ್ಮಿಸುವುದು ನಮ್ಮ ಮುಖ್ಯ ಕರ್ತವ್ಯವಾಗಿದೆ,” ಎಂದು ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ಇಂದು ಶಿವಮೊಗ್ಗ ನಗರದ ಸೂರ್ಯ ಬಡಾವಣೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ನೂತನ ರಸ್ತೆ ನಿರ್ಮಾಣ ಹಾಗೂ ಒಳಚರಂಡಿ (ಯುಜಿಡಿ) ಕಾಮಗಾರಿಗಳಿಗೆ ಮಾನ್ಯ ಶಾಸಕರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಬಡಾವಣೆಯ ನಿವಾಸಿಗಳಿಗೆ ಎದುರಾಗುತ್ತಿದ್ದ ಸಂಚಾರ ಮತ್ತು ಒಳಚರಂಡಿ ಸಮಸ್ಯೆಗೆ ಈ ಯೋಜನೆಯ ಮೂಲಕ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿಯ ಸ್ಥಳದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬೇಕು ಮತ್ತು ಸಾರ್ವಜನಿಕರ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಸಂಬಂಧಪಟ್ಟ ಇಂಜಿನಿಯರ್‌ಗಳಿಗೆ ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

S. N. Channabasappa ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀಮತಿ ಆಶಾ ಚಂದ್ರಪ್ಪ, ಶ್ರೀ ಚಂದ್ರಪ್ಪ, ವಾರ್ಡ್ ನ ಅಧ್ಯಕ್ಷರಾದ ಶ್ರೀ ರಾಜು, ಬಡಾವಣೆಯ ನಿವಾಸಿಗಳು, ಸ್ಥಳೀಯ ಪ್ರಮುಖರು, ಮುಖಂಡರು ಹಾಗೂ ಪಕ್ಷದ ಸಕ್ರಿಯ ಕಾರ್ಯಕರ್ತ ಬಾಂಧವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...