ಕೇಂದ್ರ ಸರ್ಕಾರದ ಯುವ ಕಾರ್ಯಕ್ರಮ ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಮೇರಾ ಯುವ ಭಾರತ್’ ಶಿವಮೊಗ್ಗ ಜಿಲ್ಲಾ ಕಚೇರಿಯ ವತಿಯಿಂದ 2026-2027ನೇ ಸಾಲಿನ ‘ನಶಾ ಮುಕ್ತ ಯುವ ಭಾರತ್’ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮತ್ತು ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣದ ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಕಲಾವಿದರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಮತ್ತು ಕಲಾವಿದರು ತಮ್ಮ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಕೆಗೆ
ಜಿಲ್ಲಾ ಯುವ ಅಧಿಕಾರಿ, ಮೇರಾ ಯುವ ಭಾರತ್, ತಾಲೂಕು ಪಂಚಾಯಿತಿ ಕಚೇರಿ ಎದುರು, ಆರ್ ಟಿ ಓ ಆಫೀಸ್ ರಸ್ತೆ,
ಶಿವಮೊಗ್ಗ – 577201 ಇವರನ್ನು ಸಂಪರ್ಕಿಸಬಹುದೆಂದು ತಿಳಿಸಿದೆ.
“ನಶಾಮುಕ್ತ ಯುವ ಭಾರತ್ ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರತಿಭಾವಂತ ವಿದ್ಯಾರ್ಥಿ – ಕಲಾವಿದರಿಂದ ಅರ್ಜಿ ಆಹ್ವಾನ
Date:
