Tuesday, August 4, 2026
Tuesday, August 4, 2026

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

Date:

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆ ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು, ಎಂದು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಪ್ಲಿಕೇಶನ್ ಬಿಡುಗಡೆ: ಆಯಾ ಸ್ಥಳೀಯ ಸಂಸ್ಥೆಗಳು ಹಾಗೂ ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯುವ ಸಂಘಗಳ ಸ್ಥಾಪನೆ ಕುರಿತು ತಕ್ಷಣದಿಂದಲೇ ಪ್ರಚಾರ ಕೈಗೊಳ್ಳಲು ಹಾಗೂ ಪ್ರಥಮ ಹಂತವಾಗಿ ಆಗಸ್ಟ್ 06 ರಂದು ಅಧಿಕೃತವಾಗಿ ನೋಂದಣಿ ಆ್ಯಪ್ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
ಸಂಘಗಳ ಸ್ಥಾಪನೆ ಗಡುವು: ದಿನಾಂಕ 15-08-2026 ರ ಒಳಗಾಗಿ ಎಲ್ಲಾ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕನಿಷ್ಠ 100 ಸದಸ್ಯರನ್ನೊಳಗೊಂಡ ಯುವ ಸಂಘಗಳನ್ನು ರಚನೆ ಮಾಡಲು ಸೂಚಿಸಿದರು.
ಪ್ರತಿ ಸಂಘಕ್ಕೆ ಪ್ರತಿ ವರ್ಷ ತಲಾ ರೂ. 10 ಲಕ್ಷಗಳ ಅನುದಾನ ನೀಡಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ಸ್ಥಳೀಯ ಸಂಸ್ಥೆಗಳ ಪ್ರಕಾರ ಸಂಘಗಳ ಹಂಚಿಕೆ ವಿವರ:
ಶಿವಮೊಗ್ಗ ಮಹಾನಗರ ಪಾಲಿಕೆ: 40 ಸಂಘಗಳು, ಭದ್ರಾವತಿ ನಗರಸಭೆ: 17 ಸಂಘಗಳು, ಸಾಗರ ನಗರಸಭೆ: 07 ಸಂಘಗಳು, ಶಿಕಾರಿಪುರ ಪುರಸಭೆ: 06 ಸಂಘಗಳು, ಶಿರಾಳಕೊಪ್ಪ ಪಟ್ಟಣ ಪಂಚಾಯತ್: 03 ಸಂಘಗಳು, ಸೊರಬ ಪಟ್ಟಣ ಪಂಚಾಯತ್: 03 ಸಂಘಗಳು, ಆನವಟ್ಟಿ ಪಟ್ಟಣ ಪಂಚಾಯತ್: 05 ಸಂಘಗಳು, ಜೋಗ್ ಕಾರ್ಗಲ್ ಪಟ್ಟಣ ಪಂಚಾಯತ್: 03 ಸಂಘಗಳು, ಹೊಳೆಹೊನ್ನೂರು ಪಟ್ಟಣ ಪಂಚಾಯತ್: 04 ಸಂಘಗಳು, ಹೊಸನಗರ ಪಟ್ಟಣ ಪಂಚಾಯತ್: 02 ಸಂಘಗಳು ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯತ್: 04 ಸಂಘಗಳು ಹಾಗೂ ಜಿಲ್ಲೆಯ ಒಟ್ಟು ಗ್ರಾಮಪಂಚಾಯತ್‌ಗಳಿಂದ: 262 ಸಂಘಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
DC Shivamogga ಸಂಘದ ಸದಸ್ಯತ್ವಕ್ಕೆ ಅರ್ಹತೆ ಮತ್ತು ನಿಯಮಗಳು:
ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಒಬ್ಬ ವ್ಯಕ್ತಿ ಕೇವಲ ಒಂದು ಸಂಘದಲ್ಲಿ ಮಾತ್ರ ನೋಂದಣಿಯಾಗಲು ಅವಕಾಶವಿರುತ್ತದೆ.
ವಯೋಮಿತಿ 16 ರಿಂದ 35 ವರ್ಷಗಳ ಒಳಗಿರಬೇಕು.
ಸದಸ್ಯರು ಸಂಬಂಧಿಸಿದ ಸ್ಥಳೀಯ ಸಂಸ್ಥೆ / ನಗರ ಸಂಸ್ಥೆ ವ್ಯಾಪ್ತಿಯಲ್ಲಿ ಕನಿಷ್ಠ 6 ತಿಂಗಳುಗಳಿಂದ ವಾಸವಾಗಿರಬೇಕು.
ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಪೂರ್ಣ ಸಹಕಾರ ನೀಡಲಿವೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೇಮಂತ್, ಎನ್., ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖ್ಯಾ ನಾಯ್ಕ್ ಹಾಗೂ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...

S.N. Channabasappa ಮೈದುಂಬಿದ ಹರಿವ ತುಂಗೆ ಶಿವಮೊಗ್ಗ ನಗರದ ಜೀವನಾಡಿ, ಸಮೃದ್ಧಿಯ ಸಂಕೇತ : ಎಸ್.ಎನ್.ಚನ್ನಬಸಪ್ಪ

S.N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ ಮೈದುಂಬಿ...