Monday, August 17, 2026
Monday, August 17, 2026

ರಾಷ್ಟ್ರೀಯ ತೋಟಗಾರಿಕಾ ದಿನ ವಿಶೇಷವಾಗಿ ಬೆಣ್ಣೆಹಣ್ಣಿನ ಕ್ಷೇತ್ರೋತ್ಸವ

Date:

ಅವಕಾಡೊ (ಬೆಣ್ಣೆ ಹಣ್ಣು) ಬೆಳೆಗೆ ರಾಜ್ಯದಲ್ಲಿ ಉತ್ತಮ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಐಸಿಎಆರ್–ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, ಚೆಟ್ಟಹಳ್ಳಿ ಕೇಂದ್ರದ ವತಿಯಿಂದ ಆಗಸ್ಟ್ 7ರಂದು, ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಅವಕಾಡೊ ತೋಟಗಾರಿಕೆ ಕುರಿತು ವಿಶೇಷ ತರಬೇತಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಬೆಣ್ಣೆಹಣ್ಣಿನ ವೈಜ್ಞಾನಿಕ ಬೇಸಾಯ ಕ್ರಮಗಳು, ನೂತನ ತಳಿಗಳು, ಸಸ್ಯೋತ್ಪಾದನಾ ಪದ್ಧತಿಗಳು, ಸಮಗ್ರ ಪೋಷಕಾಂಶ ನಿರ್ವಹಣೆ, ರೋಗ ಹಾಗೂ ಕೀಟಗಳ ನಿಯಂತ್ರಣ, ಮೌಲ್ಯವರ್ಧನೆ, ಸಂಸ್ಕರಣೆ ಹಾಗೂ ಕೃಷಿ ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುತ್ತದೆ.

ರಾಜ್ಯದ ಮಾವು ಬೆಳೆಯುತ್ತಿರುವ ಪ್ರದೇಶಗಳಲ್ಲಿ ಬೆಣ್ಣೆಹಣ್ಣಿನ ಬೆಳೆಯುವ ಸಾಧ್ಯತೆ ಹಾಗೂ ಲಾಭದಾಯಕತೆಯ ಬಗ್ಗೆ ತಜ್ಞರು ರೈತರಿಗೆ ಮಾರ್ಗದರ್ಶನ ನೀಡಲಿದ್ದಾರೆ.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತ ರೈತರು ಮುಂಗಡವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಡಾ. ವಿನಯ್ ಅವರನ್ನು 9591195573 ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.

ಸಂಘಟಕರ ಮಾಹಿತಿ ಪ್ರಕಾರ, ತರಬೇತಿಯಲ್ಲಿ ಭಾಗವಹಿಸುವ ರೈತರಿಗೆ ಉಚಿತ ಊಟದ ವ್ಯವಸ್ಥೆ ಮಾಡಲಾಗಿದ್ದು, ಆಗಸ್ಟ್ 7ರಂದು ನೋಂದಾಯಿತ ರೈತರಿಗೆ ಬೆಣ್ಣೆಹಣ್ಣಿನ ಸಸಿಗಳನ್ನೂ ಉಚಿತವಾಗಿ ವಿತರಿಸಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...