Wednesday, August 5, 2026
Wednesday, August 5, 2026

ರಾಷ್ಟ್ರೀಯ ತೋಟಗಾರಿಕಾ ದಿನ ವಿಶೇಷವಾಗಿ ಬೆಣ್ಣೆಹಣ್ಣಿನ ಕ್ಷೇತ್ರೋತ್ಸವ

Date:

ಅವಕಾಡೊ (ಬೆಣ್ಣೆ ಹಣ್ಣು) ಬೆಳೆಗೆ ರಾಜ್ಯದಲ್ಲಿ ಉತ್ತಮ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಐಸಿಎಆರ್–ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, ಚೆಟ್ಟಹಳ್ಳಿ ಕೇಂದ್ರದ ವತಿಯಿಂದ ಆಗಸ್ಟ್ 7ರಂದು, ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಅವಕಾಡೊ ತೋಟಗಾರಿಕೆ ಕುರಿತು ವಿಶೇಷ ತರಬೇತಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಬೆಣ್ಣೆಹಣ್ಣಿನ ವೈಜ್ಞಾನಿಕ ಬೇಸಾಯ ಕ್ರಮಗಳು, ನೂತನ ತಳಿಗಳು, ಸಸ್ಯೋತ್ಪಾದನಾ ಪದ್ಧತಿಗಳು, ಸಮಗ್ರ ಪೋಷಕಾಂಶ ನಿರ್ವಹಣೆ, ರೋಗ ಹಾಗೂ ಕೀಟಗಳ ನಿಯಂತ್ರಣ, ಮೌಲ್ಯವರ್ಧನೆ, ಸಂಸ್ಕರಣೆ ಹಾಗೂ ಕೃಷಿ ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುತ್ತದೆ.

ರಾಜ್ಯದ ಮಾವು ಬೆಳೆಯುತ್ತಿರುವ ಪ್ರದೇಶಗಳಲ್ಲಿ ಬೆಣ್ಣೆಹಣ್ಣಿನ ಬೆಳೆಯುವ ಸಾಧ್ಯತೆ ಹಾಗೂ ಲಾಭದಾಯಕತೆಯ ಬಗ್ಗೆ ತಜ್ಞರು ರೈತರಿಗೆ ಮಾರ್ಗದರ್ಶನ ನೀಡಲಿದ್ದಾರೆ.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತ ರೈತರು ಮುಂಗಡವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಡಾ. ವಿನಯ್ ಅವರನ್ನು 9591195573 ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.

ಸಂಘಟಕರ ಮಾಹಿತಿ ಪ್ರಕಾರ, ತರಬೇತಿಯಲ್ಲಿ ಭಾಗವಹಿಸುವ ರೈತರಿಗೆ ಉಚಿತ ಊಟದ ವ್ಯವಸ್ಥೆ ಮಾಡಲಾಗಿದ್ದು, ಆಗಸ್ಟ್ 7ರಂದು ನೋಂದಾಯಿತ ರೈತರಿಗೆ ಬೆಣ್ಣೆಹಣ್ಣಿನ ಸಸಿಗಳನ್ನೂ ಉಚಿತವಾಗಿ ವಿತರಿಸಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...