B.Y. Raghavendra ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ (SDCCI) ಪ್ರಮುಖ ಪದಾಧಿಕಾರಿಗಳ ನಿಯೋಗದೊಂದಿಗೆ ಶಿವಮೊಗ್ಗ ಲೋಕಸಭಾಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗೂ ಬೈಂದೂರು ಭಾಗದ ಬಾಕಿ ಉಳಿದಿರುವ ಪ್ರಮುಖ ರೈಲ್ವೆ ಯೋಜನೆಗಳು ಮತ್ತು ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಿದರು
B.Y. Raghavendra ಈ ಸಂದರ್ಭದಲ್ಲಿ ಕೋಟೆಗಂಗೂರು ಕೋಚಿಂಗ್ ಡಿಪೋ, ಬೈಂದೂರು ಭಾಗದ ರೈಲ್ವೆ ಮೂಲಸೌಕರ್ಯ ಸೇರಿದಂತೆ ಜನತೆ ಮತ್ತು ವ್ಯಾಪಾರ ವಲಯಕ್ಕೆ ಅತ್ಯಂತ ಅಗತ್ಯವಾಗಿರುವ ವಿವಿಧ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ವಿಶೇಷವಾಗಿ ಸಂಸದರು ಒತ್ತಾಯಿಸಿದರು.
ಶಿವಮೊಗ್ಗ ಹಾಗೂ ಮಲೆನಾಡಿನ ಸಮಗ್ರ ಅಭಿವೃದ್ಧಿಗೆ ರೈಲ್ವೆ ಮೂಲಸೌಕರ್ಯ ಅತ್ಯಂತ ಪ್ರಮುಖವಾಗಿದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಕ್ಷೇತ್ರದ ರೈಲ್ವೆ ಅಭಿವೃದ್ಧಿ ಯೋಜನೆಗಳನ್ನು ಶೀಘ್ರದಲ್ಲೇ ಸಾಕಾರಗೊಳಿಸಲು ನನ್ನ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.
