Saturday, August 8, 2026
Saturday, August 8, 2026

ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಚರ್ಚಾ ಸಭೆ: ಕಾಂಗ್ರೆಸ್ ಕಾರ್ಯಕರ್ತರಲ್ಲೇ ಪರಸ್ಪರ ಚಕಮಕಿ, ರಾದ್ಧಾಂತ

Date:

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.

ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಎಐಸಿಸಿ ವೀಕ್ಷಕ ಶರತ್ ನೇತೃತ್ವದ ತಂಡ ಸಭೆ ನಡೆಸುತ್ತಿತ್ತು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗಲಾಟೆ ಆರಂಭವಾಗಿದೆ.

ಕಾಂಗ್ರೆಸ್ ಮುಖಂಡ ರಂಗೇಗೌಡ ಅವರಿಗೆ ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಪ್ರವೇಶ ನೀಡದ ಹಿನ್ನೆಲೆಯಲ್ಲಿ ಗಲಾಟೆ ಶುರುವಾಗಿದೆ ಎನ್ನಲಾಗಿದೆ. ಸಭಾಂಗಣದ ಹೊರಭಾಗದಲ್ಲಿ ನಿಂತಿದ್ದ ಕಾರ್ಯಕರ್ತರೊಬ್ಬರು ರಂಗೇಗೌಡರನ್ನು ತಡೆದಿದ್ದು, ಈ ವೇಳೆ ರಂಗೇಗೌಡ ಧರಿಸಿದ್ದ ಶರ್ಟ್ ಹರಿದು ರಾದ್ಧಾಂತ ಉಂಟಾಗಿದೆ.

ಬಳಿಕ ಕಾಂಗ್ರೆಸ್ ಮುಖಂಡ ಕಲೀಂ ಪಾಷಾ ಗುಂಪು ಹಾಗೂ ರಂಗೇಗೌಡ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಸಭಾಂಗಣದಲ್ಲಿದ್ದ ಕುರ್ಚಿಗಳನ್ನು ಎತ್ತಿ ಹಾಕಿ ಪುಡಿ ಮಾಡಲಾಗಿದೆ.

ಗಲಾಟೆ ಬಿಡಿಸಲು ಬಂದವರು ಕೂಡ ಕೆಲಕಾಲ ತಬ್ಬಿಬ್ಬಾದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಗಲಾಟೆ ನಿಯಂತ್ರಿಸಿ ಎರಡೂ ಗುಂಪಿನವರನ್ನು ಅಲ್ಲಿಂದ ಕಳುಹಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...