Tuesday, August 11, 2026
Tuesday, August 11, 2026

DC Shivamogga ಆಗಸ್ಟ್ ತಿಂಗಳಿನಲ್ಲೇ ಆಗಸ್ಟ್ ಮತ್ತು ಸೆಪ್ಟೆಂಬರ್ ಎರಡೂ ತಿಂಗಳ ಪಡಿತರ ಅಕ್ಕಿ ವಿತರಣೆ: ಪ್ರಭುಲಿಂಗ ಕವಳಿ‌ಕಟ್ಟಿ

Date:

DC Shivamogga ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅನ್ನಭಾಗ್ಯ ಯೋಜನೆಯಡಿ 2026ರ ಆಗಸ್ಟ್ ಮತ್ತು ಸೆಪ್ಟಂಬರ್ ಮಾಹೆಗಳ ಅನ್ನಭಾಗ್ಯ ಪಡಿತರವನ್ನು ಆಗಸ್ಟ್ ಮಾಹೆಯಲ್ಲಿ ಒಂದೇ ಬಾರಿಗೆ ಒಟ್ಟಾಗಿ ವಿತರಣೆ ಮಾಡಲು ಸರ್ಕಾರವು ಆದೇಶಿಸಿದೆ.
ಅಂತ್ಯೋದಯ ಅನ್ನ ಯೋಜನೆಯಡಿ ಪಡಿತರ ಚೀಟಿಗೆ ಎರಡು ತಿಂಗಳ ಒಟ್ಟು 70 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು. ಆದ್ಯತಾ ಪಡಿತರ ಚೀಟಿಗೆ ಎರಡು ತಿಂಗಳ ಒಟ್ಟು 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು.
DC Shivamogga ಪಡಿತರ ಚೀಟಿದಾರರು ಆಹಾರ ಧಾನ್ಯವನ್ನು ಪಡೆಯುವಾಗ ಆಗಸ್ಟ್ ಮತ್ತು ಸೆಪ್ಟಂಬರ್ ಮಾಹೆಗಳ ಹಂಚಿಕೆಗಳಿಗೆ ಒಂದು ಬಾರಿ ಕಡ್ಡಾಯವಾಗಿ ಬಯೋ ನೀಡಿ ಪಡಿತರ ಪಡೆಯುವುದು. ಪ್ರತಿ ದಿನ ಬೆಳಗ್ಗೆ 6.00 ರಿಂದ ರಾತ್ರಿ 10.00ರವರೆಗೆ ಪಡಿತರ ವಿತರಣೆಗೆ ಸರ್ವರ್ ಲಭ್ಯಗೊಳಿಸಿರುವುದರಿಂದ ಆ. 31 ರೊಳಗಾಗಿ ನ್ಯಾಯಬೆಲೆ ಅಂಗಡಿಗೆ ತೆರಳಿ ಎರಡು ಬಾರಿ ಬಯೋ ನೀಡಿ ಪಡಿತರ ಪಡೆಯುವುದು. ಪಡಿತರ ವಿತರಣೆ ಸಂಬಂಧ ಯಾವುದೇ ದೂರುಗಳಿದ್ದಲ್ಲಿ ಕೇಂದ್ರ ಸಹಾಯವಾಣಿ 1967 ಕ್ಕೆ ಕರೆ ಮಾಡಿ ಅಥವಾ ಹತ್ತಿರದ ಆಹಾರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...