Thursday, August 13, 2026
Thursday, August 13, 2026

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Date:

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಳೆದ 20 ದಿನಗಳಿಂದ ಗುಟ್ಕಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆ ಮೇಲೆ ದುಷ್ಪರಿಣಾಮ ಬೀರಿದೆ ಎಂದು ಹೇಳಿದರು. ಅಡಿಕೆ ಬೆಳೆಯುವ ರಾಜ್ಯದಲ್ಲೇ ಗುಟ್ಕಾ ನಿಷೇಧ ಮಾಡಿರುವುದರಿಂದ ರೈತರಿಗೆ ಭಾರೀ ಅನ್ಯಾಯವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಕೂಡಲೇ ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾಗಬೇಕು. ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಅಡಿಕೆ ಬೆಳೆಯಲಾಗುತ್ತಿದ್ದು, ಬೆಳೆಗಾರರ ಹಿತ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದು ಆರಗ ಜ್ಞಾನೇಂದ್ರ ಹೇಳಿದರು.

Araga Jnanendra ಈ ಸಂಬಂಧ ನಾಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಎಲ್ಲಾ ಪಕ್ಷಗಳ ಅಡಿಕೆ ವಲಯದ ಶಾಸಕರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಸ್ಯೆ ಕುರಿತು ಚರ್ಚಿಸಲಾಗುವುದು ಎಂದರು.

ಅಡಿಕೆ ಬೆಳೆಗಾರರ ಕಲ್ಯಾಣಕ್ಕಾಗಿ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆರಗ ಜ್ಞಾನೇಂದ್ರ ಒತ್ತಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...