Friday, August 21, 2026
Friday, August 21, 2026

ಮುಂಗಾರು ಹಂಗಾಮಿಗೆ ಭದ್ರಾ ನೀರು : ಸ್ಥಿತಿಗತಿಗಳನ್ನ ಪರಿಶೀಲಿಸಿ ‘ಸಿಎಂ ‘ ಅವರೊಡನೆ ಚರ್ಚಿಸಿ ನಿರ್ಧಾರ : ಮಧು ಬಂಗಾರಪ್ಪ

Date:

ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ 318 ರಲ್ಲಿ ಜರುಗಿದ ‘ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ 89ನೇ ಸಭೆ’ಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಶಾಲಾಶಿಕ್ಷಣ ಸಚಿವ ಮಧು ಬಂಗಾರಪ್ಪ ವಹಿಸಿದ್ದರು.
ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆಸಲಾಯಿತು.

​ಸಭೆಯಲ್ಲಿ ಪ್ರಸ್ತುತ ಜಲಾಶಯದಲ್ಲಿರುವ ನೀರಿನ ಸಂಗ್ರಹ ಹಾಗೂ ಸ್ಥಿತಿಗತಿಗಳನ್ನು ಕೂಲಂಕಷವಾಗಿ ಮಾಹಿತಿ ಪರಿಶೀಲಿಸಲಾಯಿತು. ಮುಂಗಾರು ಹಂಗಾಮಿಗೆ ರೈತರ ಬೆಳೆಗೆ ಅನುಕೂಲವಾಗುವಂತೆ ನೀರು ಹರಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶೀಘ್ರವೇ ಚರ್ಚಿಸಿ, ರೈತರ ಹಿತದೃಷ್ಟಿಯಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.
​ನಮ್ಮ ರೈತಾಪಿ ಬಾಂಧವರ ಶ್ರೇಯೋಭಿವೃದ್ಧಿ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...