Thursday, August 20, 2026
Thursday, August 20, 2026

ಶಿವಮೊಗ್ಗ ಆಟೋ ಕಾಂಪ್ಲೆಕ್ಸ್ ನಲ್ಲಿ ಬೀದಿ ನಾಯಿ ಹಾವಳಿ: ನಿಯಂತ್ರಣಕ್ಕೆ ಸಾರ್ವಜನಿಕರ ಮೊರೆ

Date:

ಶಿವಮೊಗ್ಗ ನಗರದ ಆಟೊ ಕಾಂಪ್ಲೆಕ್ಸ್‌ನಲ್ಲಿ ಬೀದಿ ನಾಯಿಯೊಂದು ಏಕಾಏಕಿ ದಾಳಿ ನಡೆಸಿ, ಹತ್ತಕ್ಕೂ ಹೆಚ್ಚು ಮಂದಿಗೆ ಕಚ್ಚಿರುವ ಘಟನೆ ನಡೆದಿದೆ.

ಸೋಮವಾರ ಆಟೊ ಕಾಂಪ್ಲೆಕ್ಸ್‌ನ ಎರಡನೇ ಅಡ್ಡರಸ್ತೆಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.

ಮಳಿಗೆಯವರು, ಕೆಲಸಗಾರರು ಹಾಗೂ ವಿವಿಧ ಕೆಲಸಗಳಿಗಾಗಿ ಬಂದಿದ್ದ ಸಾರ್ವಜನಿಕರ ಮೇಲೆ ನಾಯಿ ದಾಳಿ ನಡೆಸಿದೆ. ವ್ಯಕ್ತಿಯೊಬ್ಬರ ಹಿಂದಿನಿಂದ ಬಂದು ನಾಯಿ ದಿಢೀರ್ ದಾಳಿ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ.

ಆಟೊ ಕಾಂಪ್ಲೆಕ್ಸ್‌ನ ನಾಲ್ಕು ರಸ್ತೆಗಳಲ್ಲೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಂಜೆ ಬಳಿಕ ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಆತಂಕದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...