S.N. Channabasappa “ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ‘ವಿದ್ಯಾನಿಧಿ’ಯ ಆಸರೆ ಕಲ್ಪಿಸುವುದು ಸಮಾಜದ ಸರ್ವಾಂಗೀಣ ವಿಕಾಸಕ್ಕೆ ಭದ್ರ ಬುನಾದಿಯಾಗಿದೆ.”
ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ‘ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾನಿಧಿ ಸಮಾರಂಭ’ದಲ್ಲಿ ಪಾಲ್ಗೊಳ್ಳಲಾಯಿತು.
ಸಹಕಾರ ರಂಗದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಾ, ಸಮಾಜಮುಖಿ ಕಾರ್ಯಗಳು ಮತ್ತು ಶಿಕ್ಷಣ ಪ್ರೋತ್ಸಾಹಕ್ಕೆ ನಿರಂತರವಾಗಿ ಕೈಜೋಡಿಸುತ್ತಿರುವ ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ಆಡಳಿತ ಮಂಡಳಿಯ ಕಾರ್ಯ ಅತ್ಯಂತ ಶ್ಲಾಘನೀಯ. ಪುರಸ್ಕೃತರಾದ ಸಮಸ್ತ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ.
S.N. Channabasappa ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿಗಳಾದ ಶ್ರೀ ಚಕ್ರವರ್ತಿ ಸೂಲಿಬೆಲೆ, ವಿಧಾನ ಪರಿಷತ್ ಸದಸ್ಯರುಗಳಾದ ಶ್ರೀ ಡಿ ಎಸ್ ಅರುಣ್ ಮತ್ತು ಡಾ. ಧನಂಜಯ್ ಸರ್ಜಿ, ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿಯ ನಿರ್ದೇಶಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.
