Thursday, September 10, 2026
Thursday, September 10, 2026

ಶಿವಮೊಗ್ಗ ಜಿಲ್ಲೆಯಲ್ಲಿ ಅಜೋಲಾ ಮೇವಿನ 350 ಘಟಕ ಮಂಜೂರು.₹ 11.02.500 ನಿಗದಿ

Date:

ರಾಜ್ಯದಲ್ಲಿ ಜಾನುವಾರುಗಳಿಗೆ, ಅದರಲ್ಲೂ ವಿಶೇಷವಾಗಿ ಹಾಲು ನೀಡುವ ದನ-ಕರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವನ್ನು ಒದಗಿಸುವ ಸಲುವಾಗಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯು ಅಜೋಲಾ ಉತ್ಪಾದನಾ ಘಟಕಗಳನ್ನು ಉತ್ತೇಜಿಸಲು ಮಹತ್ವದ ಯೋಜನೆ ಹಮ್ಮಿಕೊಂಡಿದೆ. ಮಳೆಯ ಅಭಾವ, ಹಸಿರು ಮೇವಿನ ಕೊರತೆ ಹಾಗೂ ವ್ಯತ್ಯಾಸದ ಸಂದರ್ಭಗಳಲ್ಲಿ ಪ್ರೋಟೀನ್, ಖನಿಜಾಂಶಗಳು ಸೇರಿದಂತೆ ಉತ್ತಮ ಪೌಷ್ಟಿಕಾಂಶಗಳನ್ನು ಹೊಂದಿರುವ ಅಜೋಲಾವನ್ನು ಪೂರಕ ಆಹಾರವಾಗಿ ಬಳಸಬಹುದಾಗಿದೆ.
ಈ ಯೋಜನೆಯಡಿ ರಾಜ್ಯದ ಎಲ್ಲಾ 31 ಜಿಲ್ಲೆಗಳ 240 ತಾಲ್ಲೂಕುಗಳಲ್ಲಿ ಒಟ್ಟು 3,78,00,000 ರೂಪಾಯಿಗಳ ವೆಚ್ಚದಲ್ಲಿ 12,000 ಅಜೋಲಾ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಜಿಲ್ಲಾವಾರು ಭೌತಿಕ ಮತ್ತು ಆರ್ಥಿಕ ಗುರಿಯನ್ನು ನಿಗದಿಪಡಿಸಲಾಗಿದೆ. ಪ್ರತಿ ಘಟಕ ಸ್ಥಾಪನೆಗೆ ಅಂದಾಜು 3,150 ರೂಪಾಯಿ ವೆಚ್ಚವಾಗಲಿದೆ.
ಬೆಳಗಾವಿ ಜಿಲ್ಲೆಯಲ್ಲಿ 15 ತಾಲ್ಲೂಕುಗಳಿದ್ದು 750 ಘಟಕಗಳಿಗೆ 23,62,500 ರೂಪಾಯಿ ನಿಗದಿಪಡಿಸಲಾಗಿದೆ. ವಿಜಯಪುರ ಜಿಲ್ಲೆಯ 13 ತಾಲ್ಲೂಕುಗಳಿಗೆ 650 ಘಟಕಗಳಿಗೆ 20,47,500 ರೂಪಾಯಿ ಹಾಗೂ ಉತ್ತರ ಕನ್ನಡ ಜಿಲ್ಲೆಯ 12 ತಾಲ್ಲೂಕುಗಳಿಗೆ 600 ಘಟಕಗಳಿಗೆ 18,90,000 ರೂಪಾಯಿ ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಕಲಬುರಗಿ ಜಿಲ್ಲೆಯ 11 ತಾಲ್ಲೂಕುಗಳಿಗೆ 550 ಘಟಕಗಳಿಗಾಗಿ 17,32,500 ರೂಪಾಯಿ ವೆಚ್ಚವಾಗಲಿದೆ.
ಬಾಗಲಕೋಟೆ ಜಿಲ್ಲೆಯ 10 ತಾಲ್ಲೂಕು ಮತ್ತು ತುಮಕೂರು ಜಿಲ್ಲೆಯ 10 ತಾಲ್ಲೂಕುಗಳಿಗೆ ತಲಾ 500 ಘಟಕಗಳಂತೆ ತಲಾ 15,75,000 ರೂಪಾಯಿಗಳನ್ನು ನಿಗದಿಗೊಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ 9 ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆಯ 9 ತಾಲ್ಲೂಕು ಹಾಗೂ ಮೈಸೂರು ಜಿಲ್ಲೆಯ 9 ತಾಲ್ಲೂಕುಗಳಿಗೆ ತಲಾ 450 ಘಟಕಗಳನ್ನು ಸ್ಥಾಪಿಸಲು ತಲಾ 14,17,500 ರೂಪಾಯಿ ಕಾಯ್ದಿರಿಸಲಾಗಿದೆ.
ಬೀದರ್ ಜಿಲ್ಲೆಯ 8 ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆಯ 8 ತಾಲ್ಲೂಕು, ಧಾರವಾಡ ಜಿಲ್ಲೆಯ 8 ತಾಲ್ಲೂಕು, ಹಾಸನ ಜಿಲ್ಲೆಯ 8 ತಾಲ್ಲೂಕು, ಹಾವೇರಿ ಜಿಲ್ಲೆಯ 8 ತಾಲ್ಲೂಕು ಮತ್ತು ರಾಯಚೂರು ಜಿಲ್ಲೆಯ 8 ತಾಲ್ಲೂಕುಗಳಿಗೆ ತಲಾ 400 ಘಟಕಗಳನ್ನು ಹಂಚಿಕೆ ಮಾಡಲಾಗಿದ್ದು, ಪ್ರತಿಯೊಂದು ಜಿಲ್ಲೆಗೆ ತಲಾ 12,60,000 ರೂಪಾಯಿ ಅನುದಾನ ನೀಡಲಾಗಿದೆ.
ಗದಗ ಜಿಲ್ಲೆಯ 7 ತಾಲ್ಲೂಕು, ಕೊಪ್ಪಳ ಜಿಲ್ಲೆಯ‌ 7 ತಾಲ್ಲೂಕು, ಮಂಡ್ಯ ಜಿಲ್ಲೆಯ 7 ತಾಲ್ಲೂಕು, ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕು ಮತ್ತು ಉಡುಪಿ ಜಿಲ್ಲೆಯ 7 ತಾಲ್ಲೂಕುಗಳಿಗೆ ತಲಾ 350 ಘಟಕಗಳಿಗೆ ತಲಾ 11,02,500 ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕು, ದಾವಣಗೆರೆ ಜಿಲ್ಲೆಯ 6 ತಾಲ್ಲೂಕು, ಕೋಲಾರ ಜಿಲ್ಲೆಯ 6 ತಾಲ್ಲೂಕು, ವಿಜಯನಗರ ಜಿಲ್ಲೆಯ 6 ತಾಲ್ಲೂಕು ಹಾಗೂ ಯಾದಗಿರಿ ಜಿಲ್ಲೆಯ 6 ತಾಲ್ಲೂಕುಗಳಿಗೆ ತಲಾ 300 ಘಟಕಗಳ ಗುರಿ ನೀಡಲಾಗಿದ್ದು, ತಲಾ 9,45,000 ರೂಪಾಯಿ ವೆಚ್ಚವಾಗಲಿದೆ.
ಬೆಂಗಳೂರು ನಗರ ಜಿಲ್ಲೆಯ 5 ತಾಲ್ಲೂಕು, ಬಳ್ಳಾರಿ ಜಿಲ್ಲೆಯ 5 ತಾಲ್ಲೂಕು, ಚಾಮರಾಜನಗರ ಜಿಲ್ಲೆಯ‌ 5 ತಾಲ್ಲೂಕು, ಕೊಡಗು ಜಿಲ್ಲೆಯ 5 ತಾಲ್ಲೂಕು ಮತ್ತು ರಾಮನಗರ 5 ತಾಲ್ಲೂಕುಗಳಿಗೆ ತಲಾ 250 ಘಟಕ ಸ್ಥಾಪನೆಗೆ ತಲಾ 7,87,500 ರೂಪಾಯಿ ನೀಡಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಿಗೆ 200 ಘಟಕ ಸ್ಥಾಪಿಸಲು 6,30,000 ರೂಪಾಯಿ ವೆಚ್ಚ ಮಾಡಲಾಗುವುದು.
ತಾಂತ್ರಿಕ ಹಾಗೂ ವೆಚ್ಚದ ವಿವರ:
ಈ ಅಜೋಲಾ ಘಟಕಗಳನ್ನು ರೈತರ ಮನೆ ಅಥವಾ ಕೊಟ್ಟಿಗೆಯ ಸಮೀಪವೇ ಕಡಿಮೆ ಸ್ಥಳದಲ್ಲಿ ನಿರ್ಮಿಸಬಹುದಾಗಿದೆ. ಸುಮಾರು 10 ಅಡಿ ಉದ್ದ, 4 ಅಡಿ ಅಗಲ ಹಾಗೂ 1 ಅಡಿ ಆಳದ (2.60 ಮೀ. x 1.60 ಮೀ.) ಅಳತೆಯಲ್ಲಿ ಘಟಕವನ್ನು ನಿರ್ಮಿಸಲಾಗುತ್ತದೆ.
ಪ್ರತಿ ಘಟಕದ ಒಟ್ಟು ವೆಚ್ಚವಾದ 3,150 ರೂಪಾಯಿ ಯಲ್ಲಿ ಸಾಮಗ್ರಿ ಹಾಗೂ ಕೂಲಿ ವೆಚ್ಚ ಸೇರಿದೆ. ಯುವಿ-ಸ್ಟೆಬಿಲೈಸ್ಡ್ ಎಚ್‌ಡಿಪಿಇ ಶೀಟ್ (450 GSM, 10×6 ಅಡಿ) – 1,350 ರೂಪಾಯಿ
ಶೇಕಡಾ 80 ರಷ್ಟು ನೆರಳು ಬಲೆ (Shade Net) ಮತ್ತು ಬಿದಿರು/ಜಿಐ ಫ್ರೇಮ್ – 650 ರೂಪಾಯಿ
ಫಲವತ್ತಾದ ಮಣ್ಣು, ಸಗಣಿ ಮತ್ತು ಸೂಪರ್ ಫಾಸ್ಫೇಟ್ ಮಿಶ್ರಣ – 250 ರೂಪಾಯಿ
ಅಜೋಲಾ ತಳಿ/ಬೀಜ (Starter Culture/Inoculum) 2 ಕೆಜಿ – 200 ರೂಪಾಯಿ
(ಸಾಮಗ್ರಿಗಳ ಒಟ್ಟು ವೆಚ್ಚ: 2,450 ರೂಪಾಯಿ)
ಸ್ಥಳ ಸಿದ್ಧತೆ, ತೊಟ್ಟಿ ಅಳವಡಿಕೆ, ಸಂರಕ್ಷಣೆ ಮತ್ತು ಬೀಜ ಬಿತ್ತನೆ ಕೆಲಸಕ್ಕಾಗಿ 2 ಮಾನವ ದಿನಗಳ ಕೂಲಿ ವೆಚ್ಚ (ದರ ದಿನಕ್ಕೆ 350 ರೂ. ನಂತೆ) – 700 ರೂಪಾಯಿ.
ಅನುಷ್ಠಾನ ಮತ್ತು ಮಾರ್ಗದರ್ಶಿ ಸೂತ್ರಗಳು:
ಜಿಲ್ಲೆಗೆ ನಿಗದಿಪಡಿಸಿದ ಗುರಿಯನ್ನು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿವಾರು ಹಂಚಿಕೆ ಮಾಡಿ, ಸೂಕ್ತ ಸ್ಥಳ ಮತ್ತು ನೀರಿನ ಲಭ್ಯತೆ ಇರುವ ಜಾನುವಾರು ಸಾಕಣೆದಾರರನ್ನು ಆದ್ಯತೆಯ ಮೇಲೆ ಆಯ್ಕೆ ಮಾಡಲಾಗುವುದು. ಕಲುಷಿತ ನೀರಿನಲ್ಲಿ ಅಜೋಲಾ ಬೆಳೆಸಿದರೆ ಮಾಲಿನ್ಯಕಾರಕಗಳ ಅಪಾಯವಿರುವುದರಿಂದ ಕೇವಲ ಸ್ವಚ್ಛ ನೀರು ಲಭ್ಯವಿರುವ ಸ್ಥಳಗಳನ್ನಷ್ಟೇ ಆಯ್ಕೆ ಮಾಡಲಾಗುತ್ತದೆ. ಫಲಾನುಭವಿಗಳಿಗೆ ಅಜೋಲಾ ಉತ್ಪಾದನೆ, ಕೊಯ್ದು, ಸ್ವಚ್ಛತೆ, ಸಂಸ್ಕರಣೆ ಹಾಗೂ ಜಾನುವಾರುಗಳಿಗೆ ನೀಡುವ ಕುರಿತು ತಾಂತ್ರಿಕ ತರಬೇತಿ ನೀಡಲಾಗುತ್ತದೆ.
ಯೋಜನೆಯನ್ನು VB-G RAM G ಮಾರ್ಗಸೂಚಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆಗೊಳಪಟ್ಟು ಅನುಷ್ಠಾನಗೊಳಿಸಲಾಗುತ್ತದೆ. ಪ್ರತಿಯೊಂದು ಘಟಕದ ಫಲಾನುಭವಿಯ ವಿವರಗಳು, ಆಧಾರ್, ಜಿಪಿಎಸ್ ಸ್ಥಳ (GPS Location), ಕಾರ್ಯನಿರ್ವಹಣೆಯ ಮೊದಲು ಮತ್ತು ನಂತರದ ಛಾಯಾಚಿತ್ರಗಳನ್ನು ಕಡ್ಡಾಯವಾಗಿ ದಾಖಲಿಸಲಾಗುತ್ತದೆ. ಜಿಲ್ಲಾ ಉಪ ನಿರ್ದೇಶಕರು ಮಾಸಿಕ ವೇಳಾಪಟ್ಟಿ ಸಿದ್ಧಪಡಿಸಿ ಅನುಷ್ಠಾನಗೊಳಿಸಲಿದ್ದು, ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಪ್ರಗತಿ ವರದಿಯನ್ನು ರಾಜ್ಯ ಕಚೇರಿಗೆ ಸಲ್ಲಿಸಬೇಕೆಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...