Friday, September 11, 2026
Friday, September 11, 2026

Department of Kannada and Culture ಬೆಂಗಳೂರಿನಲ್ಲಿ ” ಕಲಾಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ: ಆಸಕ್ತರು ಮಳಿಗೆ ಪಡೆಯಲು ಮಾಹಿತಿ

Date:

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಯೋಜಿಸಿರುವ “ಕಲಾ ಸಂಗಮ” ಕಾರ್ಯಕ್ರಮದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ದಿನಾಂಕ: 25.09.2026 ರಿಂದ 27.09.2026ರವರೆಗೆ “ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026”ನ್ನು ರವೀಂದ್ರ ಕಲಾಕ್ಷೇತ್ರ ಆವರಣ, ಜೆ.ಸಿ. ರಸ್ತೆ, ಬೆಂಗಳೂರು ಇಲ್ಲಿ ಏರ್ಪಡಿಸಿದೆ.
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000-00 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿ ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಕಚೇರಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:22.09.2026 ರಂದು ಸಂಜೆ 5.00 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಇವರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಸಲ್ಲಿಸಲು ಕೋರಿದೆ. ಸೀಮಿತ ಮಳಿಗೆಗಳು ಲಭ್ಯವಿರುವುದರಿಂದ ಮೊದಲು ಪ್ರಾಧಿಕಾರದಲ್ಲಿ ಸ್ವೀಕೃತವಾದ ಅರ್ಜಿಗಳಿಗೆ ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂ:080-22484516 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...