ಅತ್ಯುತ್ತಮ ಇಂಜಿನೀಯರ್, ರಾಜನೀತಿಙ್ಞ, ದಾರ್ಶನಿಕ, ಸರ್. ಎಮ್. ವಿಶ್ವೇಶ್ವರಾಯರವರ ಜನ್ಮದಿನವನ್ನು ಇಂಜಿನೀಯರ್, ದಿನಾಚರಣೆಯನ್ನಾಗಿ ಆಚರಿಸಿ, ದಿನಾಂಕ ೧೫-೦೯-೨೦೨೬ ರಂದು ವಿಐಎಸ್ಪಿಯ ಸಮುದಾಯವು ತಮ್ಮ ಗೌರವ ವಂದನೆಗಳನ್ನು ಸಲ್ಲಿಸಿತು. ಶ್ರೀ ಅನೂಪ್ ಕುಮಾರ್ ಕಾರ್ಯಪಾಲಕ ನಿರ್ದೇಶಕರು, ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವ ಸಂಪನ್ಮೂಲ), ಶ್ರೀ ಪ್ರಮೋದ್ ಕುಮಾರ್ ಸಿಂಗ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ಅಮೃತ್ ಕುಮಾರ್, ಅಧ್ಯಕ್ಷರು, ವಿಐಎಸ್ಎಲ್ ಕಾರ್ಮಿಕರ ಸಂಘ, ಶ್ರೀ ಅಜಯ್ ಡಿ. ಸೋಂಕುವಾರ್, ಅಧ್ಯಕ್ಷರು, ವಿಐಎಸ್ಎಲ್ ಅಧಿಕಾರಿಗಳ ಸಂಘ ಇವರುಗಳು ವಿಐಎಸ್ಪಿ ಆವರಣದೊಳಗಿರುವ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಇಂಜಿನೀಯರಿಂಗ್ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಿದ ಹಾಗೂ ತಲೆಮಾರುಗಳಿಗೆ ಸ್ಫೂರ್ತಿಯ ಸೆಲೆಯಾಗಿರುವ ಈ ಮಹಾನ್ ವ್ಯಕ್ತಿತ್ವಕ್ಕೆ ತಮ್ಮ ಗೌರವ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸೈಲ್-ವಿಐಎಸ್ಪಿಯಲ್ಲಿ ಇಂಜಿನಿಯರ್ಸ್ ದಿನಾಚರಣೆ
Date:
