ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 14 ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ವಿತರಣೆ ಮಾಡುವ ಮೂಲಕ ತಮ್ಮ 80ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ರಾಜ್ಯದ ನಾನಾ ಭಾಗಗಳಲ್ಲಿ ಬಿಎಸ್ ವೈ ಜನ್ಮದಿನಾಚರಣೆಯ ಕಾರ್ಯಕ್ರಮಗಳು ನಡೆದಿವೆ. ಟ್ರಾಕ್ಟರ್ ವಿತರಣೆಗೂ ಮುನ್ನ ಸಂಜಯನಗರದ ರಾಧಾಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ಬಿಎಸ್ ವೈ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿ.ವೈ . ವಿಜಯೇಂದ್ರ ಸೇರಿದಂತೆ ಕುಟುಂಬಸ್ಥರು ಜೊತೆಯಲ್ಲಿದ್ದರು.
ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಪುನಹ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿಯಾಗಿದ್ದು, ಬಜೆಟ್ ಅಧಿವೇಶನದ ಬಳಿಕ ಪ್ರವಾಸ ಮಾಡಲಾಗುವುದು. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕೆನ್ನುವುದು ಜನರ ಅಪೇಕ್ಷೆಯಾಗಿದೆ.
ಬಜೆಟ್ ಅಧಿವೇಶನದ ಬಳಿಕ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುತ್ತೇವೆ. ಜನರು ನಮಗೆ ಆಶೀರ್ವದಿಸುವ ಸಂಪೂರ್ಣ ವಿಶ್ವಾಸವಿದೆ ಎಂದು ಬಿಎಸ್ ವೈ ಹೇಳಿದರು.