Thursday, February 5, 2026
Thursday, February 5, 2026

ಧೋನಿ ಪ್ರೀತಿಯ ಸರ್ ಜಡೇಜಾಗೆ ಐಪಿಎಲ್ ಸಿಎಸ್ಕೆ ತಂಡದ ನಾಯಕತ್ವ

Date:

ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ. ಅವರ ಬದಲಿಗೆ ಈಗ ರವೀಂದ್ರ ಜಡೇಜಾ ಸಿಎಸ್​ಕೆ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.

ಇನ್ನೇರಡು ದಿನಗಳಲ್ಲಿ ಐಪಿಎಲ್ (IPL 2022) 15ನೇ ಆವೃತ್ತಿ ಆರಂಭವಾಗಲಿದೆ.
ಮೊದಲ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತ್ತಾ ಸೆಣೆಸಲಿವೆ. ಈ ವಿಚಾರವನ್ನು ಸ್ವತಃ ಸಿಎಸ್​ಕೆ ಆಡಳಿತ ಮಂಡಳಿ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹೇಳಿಕೊಂಡಿದೆ.

2012 ರಿಂದ ಚೆನ್ನೈ ಸೂಪರ್ ಕಿಂಗ್ಸ್‌ನ ಅವಿಭಾಜ್ಯ ಅಂಗವಾಗಿರುವ ಜಡೇಜಾ, ಸಿಎಸ್‌ಕೆಯನ್ನು ಮುನ್ನಡೆಸುವ ಮೂರನೇ ಆಟಗಾರನಾಗಲಿದ್ದಾರೆ. ಧೋನಿ ಈ ಆವೃತ್ತಿಯಲ್ಲಿ ಮತ್ತು ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತಾರೆ ಎಂದು ಸಿಎಸ್‌ಕೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಎಂಎಸ್ ಧೋನಿ ಈ ಸೀಸನ್​ನಲ್ಲಿ ಆಡಿದ ನಂತರ ಮುಂದಿನ ಸೀಸನ್​ನಲ್ಲಿ ನಾಯಕತ್ವ ತೊರೆಯುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಧೋನಿ ಸಿಎಸ್‌ಕೆ ನಾಯಕತ್ವಕ್ಕೆ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿದ್ದಾರೆ. ಧೋನಿ ಚೆನ್ನೈ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾಗೆ ಹಸ್ತಾಂತರಿಸಿದ್ದು, ನಾಯಕ ಸ್ಥಾನದಿಂದ ಕೆಳಗಿಳಿಯುವ ಧೋನಿ ನಿರ್ಧಾರದಿಂದ ಸಿಎಸ್‌ಕೆ ಅಭಿಮಾನಿಗಳಿಗೆ ಶಾಕ್ ಆಗಿದೆ.

ಧೋನಿ ಐಪಿಎಲ್‌ನಲ್ಲಿ ಯಶಸ್ವಿ ನಾಯಕರಾಗಿದ್ದು, ಅವರ ನಾಯಕತ್ವದಲ್ಲಿ ಸಿಎಸ್​ಕೆ ತಂಡ ಇದುವರೆಗೆ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದೆ.

ಮಹೇಂದ್ರ ಸಿಂಗ್ ಧೋನಿ ಕಳೆದ 12 ಸೀಸನ್‌ಗಳಲ್ಲಿ ಚೆನ್ನೈ ತಂಡದ ನಾಯಕರಾಗಿದ್ದರು. 2008 ರಲ್ಲಿ ಲೀಗ್ ಪ್ರಾರಂಭವಾದಾಗಿನಿಂದ ಅವರು ಚೆನ್ನೈ ಸೂಪರ್ ಕಿಂಗ್ಸ್‌ ನಾಯಕತ್ವದ ಜವಬ್ದಾರಿ ಹೊತ್ತಿದ್ದರು.

ಮ್ಯಾಚ್​ ಫಿಕ್ಸಿಂಗ್ ಆರೋಪದಡಿ 2016 ಮತ್ತು 2017ರಲ್ಲಿ ಸಿಎಸ್​ಕೆ ತಂಡ ಲೀಗ್‌ನಲ್ಲಿ ಭಾಗವಹಿಸಿರಲಿಲ್ಲ. ಈ ಎರಡು ಆವೃತ್ತಿಗಳನ್ನು ಹೊರತುಪಡಿಸಿ ಚೆನ್ನೈ ಈ ಲೀಗ್‌ನ ಅತ್ಯಂತ ಯಶಸ್ವಿ ತಂಡ ಎಂದು ಹೆಸರುವಾಸಿಯಾಗಲು ಧೋನಿ ಪ್ರಮುಖ ಪಾತ್ರವಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...

Hole Honnur Police Station ಕಳೆದ ಮೊಬೈಲ್ ಪತ್ತೆ.ಮಾಲೀಕರಿಗೆ ವಾಪಸ್ ನೀಡಿದ ಪೊಲೀಸ್ ಇಲಾಖೆ.

Hole Honnur Police Station ಹೊಳೆಹೊನ್ನೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ...