ರಾಜ್ಯದಲ್ಲಿ ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಸೆ ಆರಂಭವಾಗಲಿದೆ. ಇದಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಹಿಜಾಬ್ ವಿವಾದ ಕುರಿತಂತೆ ಕೂಡ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ಇದನ್ನು ವಿದ್ಯಾರ್ಥಿಯನಿಯರು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಸಚಿವ ಬಿ.ಸಿ ನಾಗೇಶ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಈ ಬಾರಿ 8,73,846 ಎಸ್ಎಸ್ಎಲ್ಸಿ ಪರೀಕ್ಸೆ ಎದುರಿಸಲಿದ್ದಾರೆ.