Thursday, December 18, 2025
Thursday, December 18, 2025

ಮೀಸಲಾತಿ ಪ್ರಕಟಿಸಿದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ-ಸಿಎಂ

Date:

ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಒಮ್ಮತದ ತೀರ್ಮಾನವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಎಲ್ಲಾ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ ಹಿಂದುಳಿದಿರುವುದನ್ನು ಗುರುತಿಸಬೇಕು. ಅದಕ್ಕಾಗಿ ಸಮಿತಿ ರಚಿಸಬೇಕು. ಒಟ್ಟಾರೆ ಮೀಸಲಾತಿ ಶೇ 50% ನ್ನು ಮೀರಬಾರದು ಎನ್ನುವ ಸರ್ವೋಚ್ಚ ನ್ಯಾಯಾಲಯದ ಷರತ್ತುಗಳನ್ವಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಈ ತಿಂಗಳ ಅಂತ್ಯದೊಳಗೆ ಮುಂದಿನ ಸಭೆ ನಿಗದಿಪಡಿಸಲಾಗುವುದು. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಹಾಜರಾತಿಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಇತ್ತೀಚಿನ ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು. ಯಾವ ರೀತಿ ಚುನಾವಣೆ ನಡೆಯಬೇಕು ಎಂಬ ವಿಚಾರದಲ್ಲಿ ಸುದೀರ್ಘ ಚರ್ಚೆಯಾಗಿದೆ. ಅಡ್ವೊಕೇಟ್ ಜನರಲ್ ಅವರು ಕಾನೂನಿನ ವಸ್ತುಸ್ಥಿತಿಯ ವಿವರಗಳನ್ನು ತಿಳಿಸಿದ್ದಾರೆ ಎಂದರು.

ಈ ಕುರಿತು ಆಯೋಗ ರಚಿಸಿ ವರದಿ ಪಡೆದು ಚುನಾವಣೆಗೆ ಹೋಗಬೇಕೆ ಅಥವಾ ಸರ್ವೋಚ್ಚ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿ ಹಾಕಬೇಕೆ ಎನ್ನುವ ಆಯ್ಕೆ ನಮ್ಮ ಮುಂದಿದೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೆ ಚುನಾವಣೆಗೆ ಹೋಗಲು ಸಾಧ್ಯವಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...