Wednesday, December 17, 2025
Wednesday, December 17, 2025

ಸಮರಕ್ಕೆ ಸಮ್ಮತಿಸದ ಭದ್ರತಾ ಮಂಡಳಿ ಸಭೆ ಭಾರತ ತಟಸ್ಥ ನೀತಿ

Date:

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ಒಂದು ತಿಂಗಳಾಗುತ್ತಿದೆ. ದಿನದಿಂದ ದಿನಕ್ಕೆ ಯುದ್ಧದ ತೀವ್ರತೆ ಹೆಚ್ಚಾಗುತ್ತಿದೆ. ಲಕ್ಷಾಂತರ ಮಂದಿ ಉಕ್ರೇನಿಯನ್ನರು ನೀರು, ಆಶ್ರಯ ,ಆಹಾರವಿಲ್ಲದೆ ಬಿಕ್ಕಟ್ಟು ಎದುರಿಸುತ್ತಿದ್ದಾರೆ.

ತಮ್ಮವರನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ದಶಕದ ಸಂಕಷ್ಟ ಉಕ್ರೇನ್ ಈಗ ಎದುರಿಸುತ್ತಿದೆ.
ಇಂದು ಉಕ್ರೇನ್ ಗೆ ಜಗತ್ತಿನ ರಾಷ್ಟ್ರಗಳ ಮಾನವೀಯ ಅಗತ್ಯಗಳು ಕಂಡುಬಂದಿದೆ.

ಈ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ರಷ್ಯಾ ವಿರುದ್ಧ ಬಹುತೇಕ ರಾಷ್ಟ್ರಗಳು ನಿರ್ಣಯ ಹೊರಡಿಸಿವೆ.

ಉಕ್ರೇನ್ ವಿರುದ್ಧ ತಾನು ಸಾರಿದ್ದ ಯುದ್ಧವನ್ನು ಸಮರ್ಥಿಸಿಕೊಳ್ಳಲು ರಷ್ಯಾಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ 15 ಸದಸ್ಯ ರಾಷ್ಟ್ರಗಳ ಪೈಕಿ 9 ಮತಗಳು ಬೇಕಾಗಿತ್ತು. ಇತರ ನಾಲ್ಕು ಖಾಯಂ ಸದಸ್ಯರಾದ ಯುಎಸ್, ಬ್ರಿಟನ್, ಫ್ರಾನ್ಸ್ ಮತ್ತು ಚೀನಾದಿಂದ ಯಾವುದೇ ವೀಟೋ ಇಲ್ಲ.
ಆದರೆ ರಷ್ಯಾಕ್ಕೆ ಬೆಂಬಲ ಸಿಕ್ಕಿದ್ದು ಚೀನಾದಿಂದ ಮಾತ್ರ. 13 ಇತರ ಖಾಯಂ ಸದಸ್ಯ ರಾಷ್ಟ್ರಗಳು ಮತದಿಂದ ದೂರವುಳಿದವು. ಅಂದರೆ ಉಕ್ರೇನ್ ವಿರುದ್ಧ ಸಾರಿದ ಯುದ್ಧದಲ್ಲಿ ರಷ್ಯಾಕ್ಕೆ ಬೇರೆ ರಾಷ್ಟ್ರಗಳಿಂದ ಬೆಂಬಲ ಸಂಪೂರ್ಣವಾಗಿ ಸಿಕ್ಕಿಲ್ಲ ಎನ್ನಲಾಗಿದೆ.

ಉಕ್ರೇನ್ ಮತ್ತು 24 ದೇಶಗಳು ರಚಿಸಿದ ಮತ್ತು ಸುಮಾರು 100 ರಾಷ್ಟ್ರಗಳ ಸಹ ಪ್ರಾಯೋಜಕತ್ವದ ನಿರ್ಣಯವನ್ನು ಜನರಲ್ ಅಸೆಂಬ್ಲಿ ಪರಿಗಣಿಸಲು ಪ್ರಾರಂಭಿಸಿದ ಅದೇ ದಿನ ರಷ್ಯಾಕ್ಕೆ ಸೋಲುಂಟಾಗಿದೆ. ಇದು ಬೆಳೆಯುತ್ತಿರುವ ಮಾನವೀಯ ತುರ್ತುಸ್ಥಿತಿಗೆ ರಷ್ಯಾದ ಆಕ್ರಮಣಶೀಲತೆ ಕಾರಣವಾಗಿದೆ ಎಂದು ಸ್ಪಷ್ಟವಾಗಿ ತಿಳಿಯುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...