Saturday, March 28, 2026
Saturday, March 28, 2026

ತಮಿಳುನಾಡು ವಿರುದ್ಧ ಖಂಡನಾ ನಿರ್ಣಯಸದನದಲ್ಲಿ ಅಂಗೀಕಾರ

Date:

ತಮಿಳುನಾಡು ವಿರುದ್ಧದ ಖಂಡನಾ ನಿರ್ಣಯಕ್ಕೆ, ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದಿಂದ ನಿರ್ಣಯ ಮಂಡಿಸಲಾಗಿತ್ತು. ಕೆಲ ಸಣ್ಣ ತಿದ್ದುಪಡಿಯ ನಂತರ ಸರ್ವಾನುಮತದಿಂದ ಅಂಗೀಕಾರ ಕೂಡ ದೊರೆತಿತ್ತು.

ತಮಿಳುನಾಡಿನಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್
ನಿರ್ಣಯದ ಬಗ್ಗೆ ಪ್ರತಿಪಕ್ಷಗಳು ಕೇಳಿದ್ದಂತಹ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು, ಕರ್ನಾಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸಿ, ದಿನಾಂಶ 21 03, 2022 ರಂದು ತಮಿಳುನಾಡು ವಿಧಾನ ಸಭೆಯು ಸಭ್ಯವಲ್ಲದ ಭಾಷೆಯಲ್ಲಿ ಅಂಗೀಕರಿಸಿದ ಒಕ್ಕೂಟ ವಿರೋಧಿ ಮತ್ತು ಸಮರ್ಥನೀಯವಲ್ಲದ ನಿರ್ಣಯವನ್ನು ಮತ್ತು ತಮಿಳುನಾಡು ರಾಜ್ಯವು ತನ್ನ ಪ್ರಾದೇಶಿಕ ವ್ಯಾಪ್ತಿಯಲ್ಲಿ ಏಕಪಕ್ಷೀಯವಾಗಿ ಯೋಜಿಸಿರುವ ಕಾನೂನುಬಾಹಿರ ಯೋಜನೆಗಳನ್ನು ಸಹ ಈ ಸದನವು ಗಣನೆಗೆ ತೆಗೆದುಕೊಂಡಿರುತ್ತದೆ.

ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ಮಾರ್ಪಡಿಸಿ ಸಾಮಾನ್ಯ ಜಲ ವರ್ಷದಲ್ಲಿ ಬಿಳಿಗುಂಡ್ಲುವಿನಲ್ಲಿ 177.25 30 ನೀರಿನ ಪ್ರಮಾಣವನ್ನು ಖಚಿತಪಡಿಸುವಂತ ನಿಗದಿಪಡಿಸಿದೆ.

ಮಾನ್ಯ ಸರ್ವೋಚ್ಚ ನ್ಯಾಯಾಲಯವು ಹಂಚಿಕೆ ಮಾಡಿರುವಂತೆ ಬೆಂಗಳೂರು ಮೆಟ್ರೋಪಾಲಿಟನ್ ನಗರದ ಕುಡಿಯುವ ನೀರಿನ ಅಗತ್ಯತೆಗೆ 24 ಟಿಎಂಸಿ (4.75 consumptive use) ನೀರನ್ನು ಸುಸ್ಥಿರಗೊಳಿಸಲು ಹಾಗೂ ತತ್ಪರಿಮಾಣವಾಗಿ ಜಲವಿದ್ಯುತ್ ಉತ್ಪಾದನೆಗೆ ಅಂತರ್-ರಾಜ್ಯ ನದಿ ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ಯೋಜಿಸಲಾಗಿದೆ.

ಸದರಿ ಯಾವುದೇ ಭಾದಕ ಅಥವಾ ಹಾನಿಯಾಗುವುದಿಲ್ಲ. ಯೋಜನೆಯಿಂದ ತಮಿಳುನಾಡು ರಾಜ್ಯಕ್ಕೆ ಯಾವುದೇ ಭಾಧಕ ಅಥವಾ ಹಾನಿಯಾಗುವುದಿಲ್ಲ.

ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ನಿರ್ಮಿಸಲು ಕರ್ನಾಟಕ ರಾಜ್ಯವು ತನ್ನ ಸಾಂವಿಧಾನಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿದೆ. ರಾಷ್ಟ್ರೀಯ ಜಲನೀತಿಯೂ ಸಹ ಕುಡಿಯುವ ನೀರಿಗೆ ಪ್ರಥಮ ಆದ್ಯತೆಯನ್ನು ನೀಡುತ್ತದೆ. ಈ ಕುಡಿಯುವ ನೀರಿನ ಯೋಜನೆಯಿಂದ ನ್ಯಾಯಾಧಿಕರಣದ ಆದೇಶವನ್ನು ಯಾವುದೇ ರೀತಿಯಲ್ಲಿ ಉಲ್ಲಂಘಿಸುವುದಿಲ್ಲ ಎಂದಿದ್ದರು.

ಈ ಬಳಿಕ, ಕಾನೂನು ಸಚಿವ ಜೆಸಿ ಮಾಧುಸ್ವಾಮಿಯವರು, ವಿಧಾನ ಪರಿಷತ್ತಿನಲ್ಲಿಯೂ ಮೇಕೆದಾಟು ಯೋಜನೆಯ ಖಂಡನಾ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ಎಲ್ಲಾ ಪಕ್ಷಗಳಿಂದ ಅಂಗೀಕಾರದ ಮುದ್ರೆಯನ್ನು ಒತ್ತಲಾಗಿದೆ. ಈ ಮೂಲಕ ಉಭಯ ಸದನಗಳಲ್ಲಿಯೂ ಮೇಕೆದಾಟು ಯೋಜನೆಯ ಖಂಡನಾ ನಿರ್ಣಯ ಅಂಗೀಕಾರ ಪಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...