Saturday, March 28, 2026
Saturday, March 28, 2026

ಸೋಲದ ಉಕ್ರೇನ್ ಛಲ ಬಿಡದ ರಷ್ಯ

Date:

ರಷ್ಯಾ ಉಕ್ರೇನ್‌ನಿಂದ ತೀವ್ರ ಪ್ರತಿರೋಧವನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ಕೀವ್ ವಶಪಡಿಸಿಕೊಳ್ಳುವ ಗುರಿಯೊಂದಿಗೆ ರಷ್ಯಾ ತನ್ನ ಶಸ್ತ್ರಾಗಾರದಲ್ಲಿರುವ ಒಂದೊಂದು ಅಸ್ತ್ರವನ್ನೂ ಹೊರ ತೆಗೆಯುತ್ತಿದೆ.

ಈಗಾಗಲೇ ಎರಡು ಬಾರಿ ಕಿಂಜಾಲ್ ಹೈಪರ್ಸಾನಿಕ್ ಕ್ಷಿಪಣಿ ದಾಳಿ ನಡೆಸಿದ ಪುಟಿನ್ ಸೇನೆ, ಇತ್ತೀಚೆಗೆ ಮತ್ತೊಂದು ಶಕ್ತಿಶಾಲಿ ಅಸ್ತ್ರದ ಪ್ರಯೋಗ ಮಾಡಿದೆ ಎಂದು ಹೇಳಿಕೊಂಡಿದೆ.

ಕ್ಷಿಪಣಿಯನ್ನು ರಷ್ಯಾದ ಕಾರ್ವೆಟ್‌ನಿಂದ ಕ್ರೈಮಿಯಾದ ಸೆವಾಸ್ಟೊಪೋಲ್‌ನಲ್ಲಿ ಸಮುದ್ರದ ಮೇಲೆ ಉಡಾಯಿಸಲಾಗಿದೆ.

ಉಕ್ರೇನ್‌ನ ಒರ್ಜೆವಾದಲ್ಲಿರುವ ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡು ಇದನ್ನು ಪ್ರಾರಂಭಿಸಲಾಯಿತು.

ಈ ಪ್ರದೇಶವು ರಾಜಧಾನಿ ಕೀವ್‌ನಿಂದ ಸುಮಾರು 200 ಮೈಲುಗಳಷ್ಟು ದೂರದಲ್ಲಿದೆ. ಈ ದಾಳಿಯಿಂದಾಗಿ ಪಾಶ್ಚ್ಯಾತ್ಯ ದೇಶಗಳು ನೀಡಿದ್ದ ಹಲವಾರು ಶಸ್ತ್ರಾಸ್ತ್ರಗಳು ದಾಳಿಯಲ್ಲಿ ನಾಶವಾದವು ಎಂದು ರಷ್ಯಾದ ಮಿಲಿಟರಿ ಹೇಳಿದೆ.

ಶತ್ರು ರಾಷ್ಟ್ರಗಳ ವಾಯು ಪ್ರದೇಶವನ್ನ ಭೇದಿಸಿ ಭೂಮಿಯ ಮೇಲಿನ ತನ್ನ ಗುರಿಯನ್ನ ತಲುಪಿ ನಾಶಪಡಿಸುವುದಕ್ಕೆ ಹೆಸರುವಾಸಿ ಈ ಕ್ಯಾಲಿಬರ್. ರಷ್ಯಾ ಈ ಕ್ಷಿಪಣಿಗಳನ್ನು ಅತ್ಯಂತ ನಿರ್ಣಾಯಕ ಗುರಿಗಳ ಮೇಲೆ ಮಾತ್ರ ಉಡಾಯಿಸುತ್ತದೆ. ಈ ಕ್ಷಿಪಣಿ ಭೂಮಿಗೆ ಕಡಿಮೆ ಎತ್ತರದಲ್ಲಿ ಹಾರಟ ನಡೆಸುತ್ತದೆ. ಸುಮಾರು 500 ಕೆಜಿಯ ವಾರ್ ಹೆಡ್ ಗಳನ್ನ ಹೊತ್ತೊಯ್ಯಬಲ್ಲ ಕ್ಯಾಲಿಬರ್ ಕ್ಷಿಪಣಿಯನ್ನು ಮಧ್ಯದಲ್ಲಿಯೇ ಹೇಗೆ ಬೇಕೋ ಹಾಗೆ ನಿಯಂತ್ರಿಸಬಹುದು. ಗೋದಾಮುಗಳು, ಕಮಾಂಡ್ ಪೋಸ್ಟ್‌ಗಳು, ಬಂದರುಗಳು ಮತ್ತು ವಿಮಾನ ನಿಲ್ದಾಣಗಳನ್ನು ನಾಶಮಾಡಲು ಕ್ಷಿಪಣಿಯನ್ನು ಬಳಸಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಆಕಸ್ಮಿಕ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮಿಪದ...

CM Siddharamaih ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ- ಮುಖ್ಯಮಂತ್ರಿ ಸಿದ್ಧರಾಮಯ್ಯ.

CM Siddharamaih ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಜನ...

Shri Mahavir Jayanti ಮಾರ್ಚ್ 30. ಶ್ರೀಮಹಾವೀರ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಜ್ಜು.

Shri Mahavir Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ...

Davangere By Election ಸಾದಿಕ್ ಪೈಲ್ವಾನ್ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ.

Davangere By Election ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ...