Thursday, July 9, 2026
Thursday, July 9, 2026

ತಿಂಗಳಾದರೂ ನಿಲ್ಲದ ಸಮರ ಸಂಧಾನಕ್ಕೆ ಝೆಲೆನ್ಸ್ಕಿ ಮನವಿ

Date:

ಉಕ್ರೇನ್‌ ಮತ್ತು ರಷ್ಯಾದ ನಡುವಿನ ಯುದ್ಧದಿಂದ ಭಾರಿ ಹಾನಿಯುಂಟಾಗಿದೆ. ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ. ಹಾಗಾಗಿ, ಝೆಲೆನ್ಸ್ಕಿ ಮತ್ತೊಮ್ಮೆ ರಷ್ಯಾಕ್ಕೆ ಮಾತುಕತೆ ನಡೆಸಿ, ಯುದ್ಧ ಕೊನೆಗೊಳಿಸುವಂತೆ ಮನವಿ ಮಾಡಿದ್ದಾರೆ.

ಆದರೆ, ಉಕ್ರೇನ್ ಶಾಂತಿಯ ಸಲುವಾಗಿ ತನ್ನ ಯಾವುದೇ ಪ್ರದೇಶವನ್ನು ಬಿಟ್ಟುಕೊಡಲು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ರಷ್ಯಾವು ಉಕ್ರೇನ್ ಮೇಲೆ ಯುದ್ಧ ಸಾರಿ ಒಂದು ತಿಂಗಳು ಪೂರ್ಣಗೊಂಡಿವೆ. ರಷ್ಯಾ ನಡೆಸಿದ ಯುದ್ಧಕ್ಕೆ ಜಗತ್ತಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದರೂ ಅದಕ್ಕೆ ಜಗ್ಗದೇ ವ್ಲಾಡಿಮಿರ್ ಪುಟಿನ್ ನಿರಂತರ ದಾಳಿ ಮುಂದುವರೆಸಿದ್ದಾರೆ. ಈಗಾಗಲೇ ಉಕ್ರೇನ್‌ ಮತ್ತು ರಷ್ಯಾದ ನಡುವಿನ ಯುದ್ಧದಿಂದ ಭಾರಿ ಹಾನಿಯುಂಟಾಗಿದ್ದು, ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ.

ಇನ್ನೊಂದೆಡೆ, ರಷ್ಯಾ ದಾಳಿಗೆ ಹೆದರಿ ಹಲವಾರು ಮಂದಿ ಉಕ್ರೇನ್‌ನಿಂದ ಪಲಾಯನ ಮಾಡಿದ್ದಾರೆ. ಶುಕ್ರವಾರ ರಾಷ್ಟ್ರವನ್ನುದ್ದೇಶಿಸಿ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ರಷ್ಯಾದ ಜನರಲ್ ಸ್ಟಾಫ್‌ನ ಡೆಪ್ಯುಟಿ ಚೀಫ್ ಕರ್ನಲ್ ಜನರಲ್ ಸೆರ್ಗೆಯ್ ರುಡ್‌ಸ್ಕೋಯ್‌ಗೆ ಮಾತುಕತೆ ನಡೆಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ ರಷ್ಯಾದ ಪಡೆಗಳು ಈಗ ಡಾನ್‌ಬಾಸ್‌ ಗುರಿಯಾಗಿಸಿಕೊಂಡು ದಾಳಿ ನಡೆಸಲು ಮುಂದಾಗಿವೆ ಎಂದು ತಿಳಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ವಿಡಿಯೋ ಸಂದೇಶ ಹಂಚಿಕೊಂಡಿರುವ ಉಕ್ರೇನ್ ವಿದೇಶಾಂಗ ಸಚಿವಾಲಯ, ರಷ್ಯಾದ ಯುದ್ಧವು ಕೇವಲ ಯುದ್ಧವಲ್ಲ. ಉಕ್ರೇನ್​​​ನ ಸ್ವಾತಂತ್ರ್ಯದ ವಿರುದ್ಧದ ಯುದ್ಧವಾಗಿದೆ. ಜನರ ಹಕ್ಕು ಕಸಿದುಕೊಳ್ಳುವ ಈ ಯುದ್ಧದ ವಿರುದ್ಧ ನೀವೆಲ್ಲ ನಿಲ್ಲಬೇಕು ಎಂದು ಕೇಳಿಕೊಳ್ಳುತ್ತೇನೆ. ನಿಖರವಾಗಿ ಒಂದು ತಿಂಗಳು ಮುಂದುವರೆದಿರುವ ಈ ಯುದ್ಧವನ್ನು ನಿಲ್ಲಬಯಸುವ ನೀವೆಲ್ಲ ಒಟ್ಟಾಗಿ ನಮಗೆ ಬೆಂಬಲ ನೀಡಬೇಕು.

ರಷ್ಯಾ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದು ಝೆಲೆನ್ಸ್ಕಿ ಕರೆ ನೀಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...