Monday, October 7, 2024
Monday, October 7, 2024

ಭೂರಹಿತ ಎಸ್ಸಿ ಎಸ್ಟಿ ವರ್ಗಗಳಿಗೆ ಜಮೀನು ಮಂಜೂರಿಗೆ ಹೊಸ ಮಾರ್ಗಸೂಚಿ

Date:

ಭೂ ರಹಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ಕೃಷಿ ಕಾರ್ಮಿಕ ಕುಟುಂಬಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಎಸ್ಸಿ, ಎಸ್ಟಿ ಕೃಷಿ ಕಾರ್ಮಿಕ ಕುಟುಂಬಗಳಿಗೆ ಜಮೀನು ಕೊಡಲು ಡಾ| ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ ಭೂ ಒಡೆತನ ಯೋಜನೆಯ ಅನುಷ್ಠಾನಕ್ಕೆ ಹೊಸ ಮಾರ್ಗಸೂಚಿ ಗಳನ್ನು ತರಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಎಸ್ಸಿ, ಎಸ್ಟಿ ಜನಸಂಖ್ಯೆ ಹೆಚ್ಚಿರುವ ಕಡೆ ಕಡಿಮೆ ಭೂಮಿ ಹಂಚಿಕೆ ಆಗಿದೆ. ಜನಸಂಖ್ಯೆ ಕಡಿಮೆ ಇರುವ ಕಡೆ ಹೆಚ್ಚು ಭೂಮಿ ಹಂಚಿಕೆ ಆಗಿದೆ. ಮಂಜೂರಾದ ಜಮೀನು ಹಸ್ತಾಂತರ ಆಗಿರುವುದಿಲ್ಲ. ಇಂತಹ ಅನೇಕ ಸಮಸ್ಯೆಗಳಿವೆ. ಹಾಗಾಗಿ, ಭೂಒಡೆತನ ಯೋಜನೆ ಅನುಷ್ಠಾನಕ್ಕೆ ಹೊಸ ಮಾರ್ಗಸೂಚಿಗಳನ್ನು ತರಲಾಗುವುದು ಎಂದು ಹೇಳಿದ್ದಾರೆ.

ಇನ್ನು ಜಮೀನು ದುರ್ಬಳಕೆ ಆಗಿದ್ದರೆ ಅಥವಾ ಅಕ್ರಮವೆಸಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...