Tuesday, August 25, 2026
Tuesday, August 25, 2026

ರಾಜ್ಯಕ್ಕೆ ಏಪ್ರಿಲ್ 1 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

Date:

ಕೇಂದ್ರ ಗೃಹ ಸಚಿವ ಮತ್ತು ರಾಷ್ಟ್ರೀಯ ಬಿಜೆಪಿ ನಾಯಕ ಅಮಿತ್ ಶಾ ಅವರು ಮುಂದಿನ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಇದೇ ಸಂದರ್ಭ ದಲ್ಲಿ ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ಚಾಲನೆ ನೀಡುವ ಸಾಧ್ಯತೆ ಇದೆ.

ಇತ್ತೀಚೆಗೆ ನಡೆದ 5 ರಾಜ್ಯಗಳ ಚುನಾವಣೆಗಳಲ್ಲಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ನಂತರ ಏಪ್ರಿಲ್ 1ರಂದು ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.

ವಿಧಾನಸಭೆ ಚುನಾವಣೆಗೆ ಒಂದು ವರ್ಷ ಮುಂಚಿತವಾಗಿ ಅವರು ಕರ್ನಾಟಕದಲ್ಲಿ ಪಕ್ಷದ ಪ್ರಚಾರವನ್ನು ಪ್ರಾರಂಭಿಸುವ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಮುಖ್ಯಮಂತ್ರಿ ಮತ್ತು ರಾಜ್ಯ ನಾಯಕರೊಂದಿಗೆ ಚರ್ಚಿಸಲಿದ್ದಾರೆ.

ವಿಶೇಷವಾಗಿ, ರಾಜ್ಯದ ಪ್ರಮುಖ ಲಿಂಗಾಯತ ಧಾರ್ಮಿಕ ಕ್ಷೇತ್ರವಾದ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮಿಗಳ 116ನೇ ಜಯಂತಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ.

ಕರ್ನಾಟಕದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ಸಚಿವ ಶಾ ಅವರು ಭಾಗವಹಿಸುವ ಸಾಧ್ಯತೆ ಇದೆ. ಅವರ ಭೇಟಿ ಈಗಾಗಲೇ ಬಿಜೆಪಿ ವಲಯದಲ್ಲಿ ಅಲೆಗಳನ್ನು ಸೃಷ್ಟಿಸಲು ಪ್ರಾರಂಭಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಪುನಾರಚನೆಗೆ ಮತ್ತು ಮಂಡಳಿ ಮತ್ತು ನಿಗಮಗಳಿಗೆ ನಾಮನಿರ್ದೇಶಿತರ ಪಟ್ಟಿಗೆ ಅವರು ಒಪ್ಪಿಗೆ ನೀಡುತ್ತಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಅಮಿತ್ ಶಾ ಭೇಟಿಯ ವೇಳೆ ಪಕ್ಷದಲ್ಲಿನ ಪದಾಧಿಕಾರಿ ಬದಲಾವಣೆ ಚರ್ಚೆಗೆ ಬರುವ ಸಾಧ್ಯತೆ ಇದೆ. ಅವರ ಭೇಟಿಗೂ ಮುನ್ನ ಬೊಮ್ಮಾಯಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಖಾಸಗಿಯಾಗಿ ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...