Wednesday, March 25, 2026
Wednesday, March 25, 2026

ತೀರ್ಥಹಳ್ಳಿ- ಶಿವಮೊಗ್ಗ ಹೆದ್ದಾರಿ ಕಾಮಗಾರಿಗೆ ಅನುಮತಿ- ಜ್ಞಾನೇಂದ್ರ

Date:

ತೀರ್ಥಹಳ್ಳಿ-ಶಿವಮೊಗ್ಗ ರಾಷ್ಟೀಯ ಹೆದ್ದಾರಿ ಯೋಜನೆಯ ಎರಡು ಕಾಮಗಾರಿಗಳಿಗೆ ಕೇಂದ್ರ ಸರ್ಕಾರ 156 ಕೋಟಿ ರೂ. ಮಂಜೂರು ಮಾಡಿದೆ.

ಈ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ತೀರ್ಥಹಳ್ಳಿ-ಶಿವಮೊಗ್ಗ ರಾಷ್ಟೀಯ ಹೆದ್ದಾರಿಯಲ್ಲಿ ಬರುವ ಭಾರತೀಪುರ ಹೇರ್ ಪಿನ್ ತಿರುವನ್ನು ತಪ್ಪಿಸಿ, ಅತ್ಯಾಧುನಿಕ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ , ಕೇಂದ್ರ ಸರಕಾರದ ಹೆದ್ದಾರಿ ಸಚಿವಾಲಯ ಅನುಮತಿ ನೀಡಿದೆ.

58 ಕೋಟಿ ರೂಪಾಯಿಗಳ ವೆಚ್ಚದ ಈ ಕಾಮಗಾರಿಯನ್ನು ಸದ್ಯದಲ್ಲಿಯೇ ಎತ್ತಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮೇಲ್ಸೇತುವೆ ನಿರ್ಮಾಣದ ಅಗತ್ಯದ ಕುರಿತು ಈ ಹಿಂದೆ ಸಲ್ಲಿಸಿದ ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆಯಾಗಿದೆ. ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅವರೂ ಸಹ ಮೇಲ್ಸೇತುವೆ ಅಗತ್ಯದ ಬಗ್ಗೆ ಕೇಂದ್ರ ಸಚಿವರ ಜೊತೆ ಸಮಾಲೋಚಿಸಿದ್ದರು. ಹಾಗೂ ಯೋಜನೆಯನ್ನು ಕಾರ್ಯಗತಗೊಳಿಸಲು ಕೋರಿದ್ದರು ಎಂದೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಭಾರತೀಪುರ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯಷ್ಟೇ ಅಲ್ಲದೆ ತೀರ್ಥಹಳ್ಳಿ ತಾಲೂಕು ಮೇಗರವಳ್ಳಿಯಿಂದ, ಆಗುಂಬೆವರೆಗೆ 14.77 ಕಿಲೊಮೀಟರ್ ರಾಷ್ಟ್ರೀಯ ಹೆದ್ದಾರಿ 169-A ಗೆ ದ್ವಿಪಥ ಪಿಎಸ್‌, ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ರೂ 96.20 ಕೋಟಿಗೆ ಅನುಮೋದನೆ ಸಹ ನೀಡಲಾಗಿದೆ. ಕಾಮಗಾರಿ ಚುರುಕಿಗೆ ಸಹಾಯವಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.

ಈ ಎರಡೂ ಕಾಮಗಾರಿಗಳಿಗೆ ಅನುಮತಿ ನೀಡಿ ಅನುದಾನ ಬಿಡುಗಡೆ ಮಾಡಿರುವ ಪ್ರಧಾನಿ ನರೇಂದ್ರ ಮೋದೀಜಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ, ಹಾಗೂ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಧನ್ಯವಾದ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...