Tuesday, December 16, 2025
Tuesday, December 16, 2025

ಹಿರಿಯ ಗಮಕಿ ಶ್ರೀ ಕೇಶವ ಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

Date:

ಶಿವಮೊಗ್ಗದ ಹೊಸಹಳ್ಳಿ ಯ ಹಿರಿಯ ಗಮಕಿಗಳಾದ ಶ್ರೀ ಎಚ್ .ಆರ್ .ಕೇಶವಮೂರ್ತಿ ಅವರು ನವದೆಹಲಿಯಲ್ಲಿ ಇತ್ತೀಚೆಗಷ್ಟೇ ಪದ್ಮಶ್ರೀ ಪ್ರಶಸ್ತಿಯನ್ನ
ರಾಷ್ಟ್ರಪತಿಗಳಾದ ಶ್ರೀ ರಾಮನಾಥ ಕೋವಿಂದ್ ಅವರಿಂದ ಸ್ವೀಕರಿಸಿದ್ದಾರೆ.

ಶಿವಮೊಗ್ಗವೊಂದೇ ಅಲ್ಲ ಇಡೀ ಕರ್ನಾಟಕವೇ ಹೆಮ್ಮೆ ಪಡಬಹುದಾದ ಸಂಗತಿ.
ಶ್ರೀಯುತರು ಗಮಕ ಕಲೆಯ ಉಳಿವಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಹಿರಿಯ ಗಮಕ ಗುರುಗಳಾಗಿ ಅವರು ಅಸಂಖ್ಯ ಶಿಷ್ಯವೃಂದಕ್ಕೆ ಗಮಕ ಗಾಯನವನ್ನ ಹೇಳಿಕೊಟ್ಟಿರುತ್ತಾರೆ.
ಆಕಾಶವಾಣಿ ( ಭದ್ರಾವತಿ) ಮತ್ತು ದೂರದರ್ಶನ ಚಂದನ ಕಾರ್ಯಕ್ರಮ ದಲ್ಲಿ ಅವರ ಗಮಕ ಗಾಯನ ಪ್ರಸಾರವಾಗಿವೆ.

ಕೇಶವ ಮೂರ್ತಿ ಅವರು ಗಮಕ ಗಾಯನ ಕ್ಷೇತ್ರದಲ್ಲಿ ಪರಿಣಿತಿ ಹೊಂದಿದವರು. ಇವರು 22 ಫೆಬ್ರವರಿ 1935 ರಂದು ಜನಿಸಿದರು. ಅವರು ಹೊಸಹಳ್ಳಿಯಲ್ಲಿರುವ ಗಮಕ ಕಲಾ ಪರಿಷತ್‌ನಿಂದ ಲಭ್ಯವಿರುವ ಗಮಕದ ಧ್ವನಿ ಟ್ರ್ಯಾಕ್‌ಗಳಲ್ಲಿ ಧ್ವನಿಮುದ್ರಣಗೊಂಡ ಹಿರಿಯ ಕಲಾವಿದರಲ್ಲಿ ಒಬ್ಬರು. ಅವರು ಪ್ರಾದೇಶಿಕ ದೂರದರ್ಶನ ಮತ್ತು ಉದಯ ಟಿವಿಯಲ್ಲಿ ಮತ್ತೂರು ಕೃಷ್ಣಮೂರ್ತಿ ಅವರೊಂದಿಗೆ ಕಾರ್ಯಕ್ರಮಗಳನ್ನು ನೀಡಿದ್ದಾರೆ.

ಇವರಿಗೆ ಹಲವಾರು ಸನ್ಮಾನಗಳು ಪ್ರಶಸ್ತಿಗಳು ಪುರಸ್ಕಾರಗಳು ಲಭಿಸಿವೆ.

ಶಾಂತಲಾ ನಾಟ್ಯಶ್ರೀ ಪುರಸ್ಕಾರ 1998, ಕುಮಾರವ್ಯಾಸ ಪ್ರಶಸ್ತಿ 2009, ರಾಜ್ಯೋತ್ಸವ ಪ್ರಶಸ್ತಿ 2009 ಇನ್ನೂ ಅನೇಕ ಪ್ರಶಸ್ತಿಗಳು ಲಭಿಸಿವೆ. ಈ ವರ್ಷ(2022) ಹೆಮ್ಮೆಯ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೆ ಲೈವ್ ಮೀಡಿಯ ಶ್ರೀ ಎಚ್.ಆರ್.ಕೇಶವಮೂರ್ತಿ ಅವರಿಗೆ
ಹಾರ್ದಿಕವಾಗಿ ಅಭಿನಂದಿಸುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...