ಪಾರಂಪರಿಕ ವೈದ್ಯರಿಗೆ ಕಾನೂನಿನ ಮಾನ್ಯತೆ ನೀಡಲು ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಹೇಳಿದ್ದಾರೆ.
ವಿಧಾನ ಪರಿಷತ್ನಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ಆಯುಷ್ ವೈದ್ಯ ಪದ್ಧತಿಗಳ ಕುರಿತು ಕೇಂದ್ರ ಸರ್ಕಾರವೇ ನೀತಿ ರೂಪಿಸಿದೆ. ರಾಜ್ಯದಲ್ಲಿ ಪ್ರತ್ಯೇಕ ನೀತಿ ರೂಪಿಸಲು ಅವಕಾಶವಿಲ್ಲ. ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ ಎಂದು ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾಂಪ್ರದಾಯಿಕವಾಗಿ ಆಯುರ್ವೇದವನ್ನು ಅಭ್ಯಾಸ ಮಾಡುತ್ತಿರುವವರು ಬಳ್ಳಾರಿ ಹಾಗೂ ಬೆಂಗಳೂರಿನ ಆಯುರ್ವೇದ ವಿಶ್ವವಿದ್ಯಾಲಯಗಳಲ್ಲಿ ತಮ್ಮನ್ನು ತಾವು ನೋಂದಾಯಿಸಿಕೊಳ್ಳಬಹುದು. ಮತ್ತು ಅವರಿಗೆ ಸರ್ಕಾರ ಉಚಿತ ಸೀಟುಗಳನ್ನು ಕಾಯ್ದಿರಿಸಿದೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.