Tuesday, March 24, 2026
Tuesday, March 24, 2026

ನ್ಯಾಟೊ ಸೇರಬೇಕೆ ಬೇಡವೆ? ಜನಮತದ ಆಧಾರದ ಮೇಲೆ ನಿರ್ಧಾರ-ಝೆಲೆನ್ಸ್ಕಿ

Date:

ರಷ್ಯಾ ಮತ್ತು ಉಕ್ರೇನ್​ ನಡುವೆ ನಡೆಯಲಿರುವ ಶಾಂತಿ ಮಾತುಕತೆ ವೇಳೆ ಉಕ್ರೇನ್​ನ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಮೊದಲ ಆದ್ಯತೆ ನೀಡುವುದಾಗಿ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಅವರು ಹೇಳಿದ್ದಾರೆ.

ನಮಗೆ ಶೀಘ್ರವಾಗಿಯೇ ಶಾಂತಿ ಬೇಕಾಗಿದೆ. ತಡಮಾಡದೇ ಶಾಂತಿ ಮಾತುಕತೆ ನಡೆಯಬೇಕಿದೆ ಎಂದಿರುವ ಉಕ್ರೇನ್​ ಅಧ್ಯಕ್ಷರು, ಟರ್ಕಿಯಲ್ಲಿ ಮುಖಾಮುಖಿ ಭೇಟಿಗೆ ಅವಕಾಶ ಕಲ್ಪಿಸಬೇಕಾದ ಅವಶ್ಯಕತೆ ಇದೆ ಎಂದಿದ್ದಾರೆ.

ಮರಿಯುಪೋಲ್​ ನಗರದಲ್ಲಿ ಪರಿಸ್ಥಿತಿ ಭೀಕರವಾಗಿದೆ. ಇಂತಹ ಸನ್ನಿವೇಶಗಳ ಬಗ್ಗೆ ತಾವು ಇತರ ದೇಶಗಳ ಸಂಸತ್​ಗಳ ಗಮನಕ್ಕೆ ತರುವುದನ್ನು ಮುಂದುವರೆಸುತ್ತೇನೆ. ರಷ್ಯಾದ ಮಾರಕ ದಾಳಿಯನ್ನು ಎದುರಿಸಿ ದಿಟ್ಟ ಉತ್ತರ ನೀಡುತ್ತಿರುವ ಉಕ್ರೇನ್‌ನ ಸಶಸ್ತ್ರ ಪಡೆಗಳಿಗೆ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ ಎಂದು ಝೆಲೆನ್ಸ್ಕಿ ಅವರು ತಿಳಿಸಿದ್ದಾರೆ.

ಕೆಲವು ಪ್ರದೇಶಗಳಲ್ಲಿ ರಷ್ಯಾ ಆಕ್ರಮಣವನ್ನು ನಮ್ಮ ಸೈನಿಕರು ಹಿಮ್ಮೆಟ್ಟಿಸುತ್ತಿದ್ದಾರೆ ಎಂದು ಉಕ್ರೇನ್​ ಸೈನಿಕರ ಬೆನ್ನು ತಟ್ಟಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರಷ್ಯಾ ಪಡೆಗಳು ದೇಶದಿಂದ ಹೊರಹೋದ ನಂತರ ಉಕ್ರೇನ್​​​ ನಾಟೋ ಸೇರಬೇಕೇ ಬೇಡವೆ ಎಂಬ ಬಗ್ಗೆ ಜನಮತಗಣನೆ ಮಾಡಿ ನಿರ್ಧಾರ ಕೈಗೊಳ್ಳುವುದಾಗಿ ಝೆಲೆನ್ಸ್ಕಿ ಅವರು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...