Tuesday, August 25, 2026
Tuesday, August 25, 2026

ನ್ಯಾಟೊ ಸೇರಬೇಕೆ ಬೇಡವೆ? ಜನಮತದ ಆಧಾರದ ಮೇಲೆ ನಿರ್ಧಾರ-ಝೆಲೆನ್ಸ್ಕಿ

Date:

ರಷ್ಯಾ ಮತ್ತು ಉಕ್ರೇನ್​ ನಡುವೆ ನಡೆಯಲಿರುವ ಶಾಂತಿ ಮಾತುಕತೆ ವೇಳೆ ಉಕ್ರೇನ್​ನ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಮೊದಲ ಆದ್ಯತೆ ನೀಡುವುದಾಗಿ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಅವರು ಹೇಳಿದ್ದಾರೆ.

ನಮಗೆ ಶೀಘ್ರವಾಗಿಯೇ ಶಾಂತಿ ಬೇಕಾಗಿದೆ. ತಡಮಾಡದೇ ಶಾಂತಿ ಮಾತುಕತೆ ನಡೆಯಬೇಕಿದೆ ಎಂದಿರುವ ಉಕ್ರೇನ್​ ಅಧ್ಯಕ್ಷರು, ಟರ್ಕಿಯಲ್ಲಿ ಮುಖಾಮುಖಿ ಭೇಟಿಗೆ ಅವಕಾಶ ಕಲ್ಪಿಸಬೇಕಾದ ಅವಶ್ಯಕತೆ ಇದೆ ಎಂದಿದ್ದಾರೆ.

ಮರಿಯುಪೋಲ್​ ನಗರದಲ್ಲಿ ಪರಿಸ್ಥಿತಿ ಭೀಕರವಾಗಿದೆ. ಇಂತಹ ಸನ್ನಿವೇಶಗಳ ಬಗ್ಗೆ ತಾವು ಇತರ ದೇಶಗಳ ಸಂಸತ್​ಗಳ ಗಮನಕ್ಕೆ ತರುವುದನ್ನು ಮುಂದುವರೆಸುತ್ತೇನೆ. ರಷ್ಯಾದ ಮಾರಕ ದಾಳಿಯನ್ನು ಎದುರಿಸಿ ದಿಟ್ಟ ಉತ್ತರ ನೀಡುತ್ತಿರುವ ಉಕ್ರೇನ್‌ನ ಸಶಸ್ತ್ರ ಪಡೆಗಳಿಗೆ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ ಎಂದು ಝೆಲೆನ್ಸ್ಕಿ ಅವರು ತಿಳಿಸಿದ್ದಾರೆ.

ಕೆಲವು ಪ್ರದೇಶಗಳಲ್ಲಿ ರಷ್ಯಾ ಆಕ್ರಮಣವನ್ನು ನಮ್ಮ ಸೈನಿಕರು ಹಿಮ್ಮೆಟ್ಟಿಸುತ್ತಿದ್ದಾರೆ ಎಂದು ಉಕ್ರೇನ್​ ಸೈನಿಕರ ಬೆನ್ನು ತಟ್ಟಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರಷ್ಯಾ ಪಡೆಗಳು ದೇಶದಿಂದ ಹೊರಹೋದ ನಂತರ ಉಕ್ರೇನ್​​​ ನಾಟೋ ಸೇರಬೇಕೇ ಬೇಡವೆ ಎಂಬ ಬಗ್ಗೆ ಜನಮತಗಣನೆ ಮಾಡಿ ನಿರ್ಧಾರ ಕೈಗೊಳ್ಳುವುದಾಗಿ ಝೆಲೆನ್ಸ್ಕಿ ಅವರು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...