Friday, February 6, 2026
Friday, February 6, 2026

ನ್ಯಾಟೊ ಸೇರಬೇಕೆ ಬೇಡವೆ? ಜನಮತದ ಆಧಾರದ ಮೇಲೆ ನಿರ್ಧಾರ-ಝೆಲೆನ್ಸ್ಕಿ

Date:

ರಷ್ಯಾ ಮತ್ತು ಉಕ್ರೇನ್​ ನಡುವೆ ನಡೆಯಲಿರುವ ಶಾಂತಿ ಮಾತುಕತೆ ವೇಳೆ ಉಕ್ರೇನ್​ನ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಮೊದಲ ಆದ್ಯತೆ ನೀಡುವುದಾಗಿ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಅವರು ಹೇಳಿದ್ದಾರೆ.

ನಮಗೆ ಶೀಘ್ರವಾಗಿಯೇ ಶಾಂತಿ ಬೇಕಾಗಿದೆ. ತಡಮಾಡದೇ ಶಾಂತಿ ಮಾತುಕತೆ ನಡೆಯಬೇಕಿದೆ ಎಂದಿರುವ ಉಕ್ರೇನ್​ ಅಧ್ಯಕ್ಷರು, ಟರ್ಕಿಯಲ್ಲಿ ಮುಖಾಮುಖಿ ಭೇಟಿಗೆ ಅವಕಾಶ ಕಲ್ಪಿಸಬೇಕಾದ ಅವಶ್ಯಕತೆ ಇದೆ ಎಂದಿದ್ದಾರೆ.

ಮರಿಯುಪೋಲ್​ ನಗರದಲ್ಲಿ ಪರಿಸ್ಥಿತಿ ಭೀಕರವಾಗಿದೆ. ಇಂತಹ ಸನ್ನಿವೇಶಗಳ ಬಗ್ಗೆ ತಾವು ಇತರ ದೇಶಗಳ ಸಂಸತ್​ಗಳ ಗಮನಕ್ಕೆ ತರುವುದನ್ನು ಮುಂದುವರೆಸುತ್ತೇನೆ. ರಷ್ಯಾದ ಮಾರಕ ದಾಳಿಯನ್ನು ಎದುರಿಸಿ ದಿಟ್ಟ ಉತ್ತರ ನೀಡುತ್ತಿರುವ ಉಕ್ರೇನ್‌ನ ಸಶಸ್ತ್ರ ಪಡೆಗಳಿಗೆ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ ಎಂದು ಝೆಲೆನ್ಸ್ಕಿ ಅವರು ತಿಳಿಸಿದ್ದಾರೆ.

ಕೆಲವು ಪ್ರದೇಶಗಳಲ್ಲಿ ರಷ್ಯಾ ಆಕ್ರಮಣವನ್ನು ನಮ್ಮ ಸೈನಿಕರು ಹಿಮ್ಮೆಟ್ಟಿಸುತ್ತಿದ್ದಾರೆ ಎಂದು ಉಕ್ರೇನ್​ ಸೈನಿಕರ ಬೆನ್ನು ತಟ್ಟಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರಷ್ಯಾ ಪಡೆಗಳು ದೇಶದಿಂದ ಹೊರಹೋದ ನಂತರ ಉಕ್ರೇನ್​​​ ನಾಟೋ ಸೇರಬೇಕೇ ಬೇಡವೆ ಎಂಬ ಬಗ್ಗೆ ಜನಮತಗಣನೆ ಮಾಡಿ ನಿರ್ಧಾರ ಕೈಗೊಳ್ಳುವುದಾಗಿ ಝೆಲೆನ್ಸ್ಕಿ ಅವರು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...