Wednesday, July 8, 2026
Wednesday, July 8, 2026

ನ್ಯಾಟೊ ಸೇರಬೇಕೆ ಬೇಡವೆ? ಜನಮತದ ಆಧಾರದ ಮೇಲೆ ನಿರ್ಧಾರ-ಝೆಲೆನ್ಸ್ಕಿ

Date:

ರಷ್ಯಾ ಮತ್ತು ಉಕ್ರೇನ್​ ನಡುವೆ ನಡೆಯಲಿರುವ ಶಾಂತಿ ಮಾತುಕತೆ ವೇಳೆ ಉಕ್ರೇನ್​ನ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಮೊದಲ ಆದ್ಯತೆ ನೀಡುವುದಾಗಿ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಅವರು ಹೇಳಿದ್ದಾರೆ.

ನಮಗೆ ಶೀಘ್ರವಾಗಿಯೇ ಶಾಂತಿ ಬೇಕಾಗಿದೆ. ತಡಮಾಡದೇ ಶಾಂತಿ ಮಾತುಕತೆ ನಡೆಯಬೇಕಿದೆ ಎಂದಿರುವ ಉಕ್ರೇನ್​ ಅಧ್ಯಕ್ಷರು, ಟರ್ಕಿಯಲ್ಲಿ ಮುಖಾಮುಖಿ ಭೇಟಿಗೆ ಅವಕಾಶ ಕಲ್ಪಿಸಬೇಕಾದ ಅವಶ್ಯಕತೆ ಇದೆ ಎಂದಿದ್ದಾರೆ.

ಮರಿಯುಪೋಲ್​ ನಗರದಲ್ಲಿ ಪರಿಸ್ಥಿತಿ ಭೀಕರವಾಗಿದೆ. ಇಂತಹ ಸನ್ನಿವೇಶಗಳ ಬಗ್ಗೆ ತಾವು ಇತರ ದೇಶಗಳ ಸಂಸತ್​ಗಳ ಗಮನಕ್ಕೆ ತರುವುದನ್ನು ಮುಂದುವರೆಸುತ್ತೇನೆ. ರಷ್ಯಾದ ಮಾರಕ ದಾಳಿಯನ್ನು ಎದುರಿಸಿ ದಿಟ್ಟ ಉತ್ತರ ನೀಡುತ್ತಿರುವ ಉಕ್ರೇನ್‌ನ ಸಶಸ್ತ್ರ ಪಡೆಗಳಿಗೆ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ ಎಂದು ಝೆಲೆನ್ಸ್ಕಿ ಅವರು ತಿಳಿಸಿದ್ದಾರೆ.

ಕೆಲವು ಪ್ರದೇಶಗಳಲ್ಲಿ ರಷ್ಯಾ ಆಕ್ರಮಣವನ್ನು ನಮ್ಮ ಸೈನಿಕರು ಹಿಮ್ಮೆಟ್ಟಿಸುತ್ತಿದ್ದಾರೆ ಎಂದು ಉಕ್ರೇನ್​ ಸೈನಿಕರ ಬೆನ್ನು ತಟ್ಟಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರಷ್ಯಾ ಪಡೆಗಳು ದೇಶದಿಂದ ಹೊರಹೋದ ನಂತರ ಉಕ್ರೇನ್​​​ ನಾಟೋ ಸೇರಬೇಕೇ ಬೇಡವೆ ಎಂಬ ಬಗ್ಗೆ ಜನಮತಗಣನೆ ಮಾಡಿ ನಿರ್ಧಾರ ಕೈಗೊಳ್ಳುವುದಾಗಿ ಝೆಲೆನ್ಸ್ಕಿ ಅವರು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...