Monday, August 24, 2026
Monday, August 24, 2026

ಧಾರ್ಮಿಕ ಸಾಮರಸ್ಯ ಕಾಪಾಡಲು ಸಾಹಿತಿಗಳ ಮನವಿ

Date:

ರಾಜ್ಯದಲ್ಲಿ ಧರ್ಮ ಸಂಘರ್ಷ ಮುಂದುವರಿದಿದೆ.
ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿರುವುದು ಸರಿಯಲ್ಲ. ಮುಸ್ಲಿಂ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಕಾನೂನು ತಿದ್ದುಪಡಿ ಮಾಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ 61 ಸಾಹಿತಿಗಳು ಪತ್ರ ಬರೆದಿದ್ದಾರೆ.

ಡಾ.ಕೆ.ಮರುಳ ಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ರೆಹಮತ್ ತರಿಕೆರೆ ಸೇರಿ ಒಟ್ಟು 61 ಸಾಹಿತಿಗಳು ಈ ಸಂಬಂಧ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ಸಮವಸ್ತ್ರದೊಂದಿಗೆ ಹಿಜಾಬ್‍ಗೂ ಅವಕಾಶ ಕೊಡಿ, ಪಠ್ಯದಲ್ಲಿ ಭಗವದ್ಗೀತೆಗಿಂತ ಸಂವಿಧಾನವನ್ನು ಓದುವುದು ಅತ್ಯಗತ್ಯ. ಹೀಗಾಗಿ ಭಗವದ್ಗೀತೆಯನ್ನು ಪಠ್ಯದಲ್ಲಿ ಕೈಬಿಡುವಂತೆ ಹಾಗೂ ಸಮವಸ್ತ್ರದ ಭಾಗವಾಗಿಯೇ ಶಿರವಸ್ತ್ರ ಧರಿಸಿ ಪರೀಕ್ಷೆಗೆ ಅನುಮತಿಸಿ. ಸದ್ಯ ಇರುವ ವಸ್ತ್ರಸಂಹಿತೆ ಸುತ್ತೋಲೆ ಅವೈಜ್ಞಾನಿಕ, ಹಿಂತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ನಿಷೇಧ ಸರಿಯಲ್ಲ. ಎಲ್ಲ ಜಾತ್ರೆ, ಉತ್ಸವಗಳು ಒಂದು ಧರ್ಮದ, ಜಾತಿಯ ಉತ್ಸವಗಳಾಗಿ ಜಾತ್ರೆ ನಡೆಯಲ್ಲ. ಸಾಮರಸ್ಯದ ನಾಡಿನಲ್ಲಿ ಮುಸ್ಲಿಂ ವರ್ತಕರ ಬಹಿಷ್ಕಾರ ಅಸಂವಿಧಾನಿಕ ನಡೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...